Slide
Slide
Slide
previous arrow
next arrow

ಲಯನ್ಸ್ ಶಾಲೆಯಲ್ಲಿ ಶಬರ ಸಂಸ್ಥೆಯಿಂದ ಯಕ್ಷಗಾನ ತರಬೇತಿ ಶಿಬಿರ

300x250 AD

ಶಿರಸಿ: ನಗರದ ಲಯನ್ಸ್ ಶಾಲೆಯ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ತರಬೇತಿ ಶಿಬಿರವನ್ನು ಶಬರ ಸಂಸ್ಥೆ ಆಯೊಜಿಸಿದೆ. ನ. 25, ಶುಕ್ರವಾರ ಬೆಳಿಗ್ಗೆ 10.30ಕ್ಕೆ ಶಿರಸಿ ಲಯನ್ಸ ಶಾಲಾ ಸಭಾಂಗಣದಲ್ಲಿ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಲೋಕಧ್ವನಿ ದಿನಪತ್ರಿಕೆಯ ವಾರ್ತಾಸಂಪಾದಕಿ ಹಾಗೂ ದೂರದರ್ಶನದ ಜಿಲ್ಲಾ ವರದಿಗಾರರಾದ ಶ್ರೀಮತಿ ವಿನುತಾ ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಲಯನ್ಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾ ಲಯನ್ ಪ್ರೊ.ಎನ್.ವಿ.ಜಿ.ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಲಯನ್ಸ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಲಯನ್. ಪ್ರೊ.ರವಿ ನಾಯಕ್, ವಿಜಯ ಕರ್ನಾಟಕ ವರದಿಗಾರ ಕೃಷ್ಣಮೂರ್ತಿ ಕೆರೆಗದ್ದೆ, ಲಯನ್ಸ ಶಾಲೆಯ ಮುಖ್ಯಾಧ್ಯಾಪಕ ಶಶಾಂಕ ಹೆಗಡೆ ಎಲೆಮನೆ ಮುಖ್ಯ ಆಮಂತ್ರಿತರಾಗಿ ಪಾಲ್ಗೊಳ್ಳಲಿದ್ದಾರೆ. ಶಬರ ಸಂಸ್ಥೆಯ ಅಧ್ಯಕ್ಷ ಗಣೇಶ ಹೆಗಡೆ ಬೆಂಗಳೂರು, ಕಾರ್ಯದರ್ಶಿ ನಾಗರಾಜ ಜೋಶಿ ಸೋಂದಾ ಕಾರ್ಯಕ್ರಮವನ್ನು ಲಯನ್ಸ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top