Slide
Slide
Slide
previous arrow
next arrow

ಗಡಿ ವಿವಾದ: ಕರ್ನಾಟಕದ ಬಸ್‌ಗಳಿಗೆ ಕಪ್ಪು ಮಸಿ ಬಳಿದ ಮರಾಠಿಗರು!

300x250 AD

ಮುಂಬೈ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಮುನ್ನಲೆಗೆ ಬರುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಮರಾಠಿಗರು ಕರ್ನಾಟಕದ ಬಸ್‌ಗಳನ್ನು ಅಡ್ಡಗಟ್ಟಿ ಪುಂಡಾಟ ಮೆರೆದಿದ್ದಾರೆ.
ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ತಡೆದು ನಿಲ್ಲಿಸಿದ ಅಖಿಲ ಭಾರತ ಮರಾಠಾ ಸಂಘದ ಕಾರ್ಯಕರ್ತರು ಬಸ್‌ಗೆ ಕಪ್ಪು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಮರಾಠಿಗರ ಪುಂಡಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಬಸ್‌ಗಳ ಮೇಲೆ ಕಪ್ಪು ಮಸಿ ಬಳಿದು ಉದ್ಧಟತನ ಮೆರೆಯುತ್ತಿರುವ ಮರಾಠಿ ಕಾರ್ಯಕರ್ತರನ್ನು ಬಂಧಿಸಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

300x250 AD
Share This
300x250 AD
300x250 AD
300x250 AD
Back to top