• Slide
    Slide
    Slide
    previous arrow
    next arrow
  • ಅಂಬೇಡ್ಕರ್ ನಾನೊಬ್ಬ ಭಾರತೀಯ ರಾಷ್ಟ್ರೀಯತೆಯ ಪ್ರತಿಪಾದಕ ಎಂದಿದ್ದರು: ಗುರುಪ್ರಸಾದ ಹೆಗಡೆ

    300x250 AD

    ಶಿರಸಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಿಂದ ದೀನದಯಾಳ ಭವನದಲ್ಲಿ ‘ಸಂವಿಧಾನ ಸಮರ್ಪಣಾ ದಿವಸ’ವನ್ನು ಆಚರಿಸಲಾಯಿತು.
    ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಭಾರತಮಾತೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಆಶಯದಂತೆ ಎಲ್ಲರ ಏಳಿಗೆಗಾಗಿ ಶ್ರಮಿಸೋಣ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡೋಣ ಎಂದರು.
    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ, ಭಾರತ ಮಾತೆಯ ಶ್ರೇಷ್ಠ ಪುತ್ರ ಅಂಬೇಡ್ಕರ್ ಅವರು ‘ನಾನೊಬ್ಬ ಭಾರತೀಯ ಹಾಗೂ ಭಾರತೀಯ ರಾಷ್ಟ್ರೀಯತೆಯ ಪ್ರತಿಪಾದಕ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದರು. ಆಧ್ಯಾತ್ಮದ ನೆಲೆಗಟ್ಟಿನಲ್ಲಿ ರಾಷ್ಟ್ರದ ಏಕತೆಯನ್ನು ಸಾಧಿಸಬೇಕು ಎಂದಿದ್ದರು ಎಂದು ತಿಳಿಸಿದರು.
    ಭಾರತದ ಸಂವಿಧಾನ ಯಾವ ರೀತಿ ಇರಬೇಕು ಎಂಬ ಸ್ಪಷ್ಟ ಕಲ್ಪನೆಯನ್ನು ಅಂಬೇಡ್ಕರ್ ಹೊಂದಿದ್ದರು. ಅಷ್ಟೇ ಅಲ್ಲ, ಭಾರತಕ್ಕೆ ಏಕಾತ್ಮ ಶಾಸನ ಬೇಕು ಎಂದು ಪ್ರತಿಪಾದಿಸಿದ್ದರು. ಬ್ರಿಟೀಷರ ಪ್ರತ್ಯೇಕತಾವಾದವನ್ನು ಅರಿತಿದ್ದ ಅಂಬೇಡ್ಕರ್, ತುಷ್ಟೀಕರಣಕ್ಕಾಗಿ ಮುಸ್ಲಿಂ ಲೀಗ್ ಪ್ರತ್ಯೇಕ ಮತಕ್ಷೇತ್ರಗಳಿಗೆ ಬೇಡಿಕೆ ಇಟ್ಟಾಗ ಅದನ್ನು ವಿರೋಧಿಸಿದ್ದರು ಹಾಗೂ ಭಾರತದ ವಿಭಜನೆಯನ್ನೂ ಕೂಡಾ ವಿರೋಧಿಸಿದ್ದರು ಎಂದರು.
    ನಾನು ಮೊದಲನೆಯದಾಗಿ ಭಾರತೀಯ ಮತ್ತು ಕೊನೆಯದಾಗಿ ಕೂಡಾ ಭಾರತೀಯ ಎನ್ನುವ ಭಾವನೆ ಜಾಗೃತವಾಗಲಿ ಎಂದು ಡಾ.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಂಬೇಡ್ಕರ್ ಅವರಿಗೆ ಸಲ್ಲಬೇಕಾದ ನಿಜವಾದ ಗೌರವವನ್ನು ಪಂಚತೀರ್ಥ ಎಂಬ ಕಲ್ಪನೆಯೊಂದಿಗೆ ಸಾಕಾರಗೊಳಿಸಿದ್ದಾರೆ. ಭಾರತ ಸಂವಿಧಾನದ ಆಶಯಗಳಿಗೆ ಪೂರಕವಾಗಿಯೇ ಬಿಜೆಪಿ ಸಂವಿಧಾನ ಕೂಡಾ ಇರುವುದರಿಂದ ಅಂತ್ಯೋದಯದ ಅನುಷ್ಠಾನ ನಮ್ಮ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳಿಂದ ಆಗುತ್ತಿದೆ ಎಂದರು.
    ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರೂ ಭಾರತದ ಸಂವಿಧಾನ ಪೀಠಿಕೆಯನ್ನು ಹೇಳಿದರು. ಇದೇ ಸಂದರ್ಭದಲ್ಲಿ ಎಸ್‌ಸಿ ಮೋರ್ಚಾದ ವತಿಯಿಂದ ನಗರಸಭೆ ಹಾಗೂ ಪಟ್ಟಣ ಪಂಚಾಯತಿಗಳಿಗೆ ನಾಮನಿರ್ದೇಶನಗೊಂಡ ಸದಸ್ಯರಿಗೆ ಸನ್ಮಾನಿಸಲಾಯಿತು. ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಉದಯ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ನಂದನ ಬೋರ್ಕರ್ ನಿರ್ವಹಿಸಿದರು. ಎಸ್‌ಸಿ ಮೋರ್ಚಾದ ನಗರ ಅಧ್ಯಕ್ಷ ಅರವಿಂದ ನೇತ್ರೇಕರ ಸ್ವಾಗತಿಸಿದರು. ವಿನಾಯಕ ನಾಯ್ಕ ಪ್ರಾಸ್ತಾವಿಕ ನುಡಿದರು. ತೃಪ್ತಿ ವಂದಿಸಿದರು. ನಗರಸಭೆಯ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಎಸ್‌ಸಿ ಮೋರ್ಚಾದ ಜಿಲ್ಲಾ ಪ್ರಭಾರಿ ಪ್ರವೀಣ ಪವಾರ, ಮಹಿಳಾ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ, ನಗರ ಮತ್ತು ಗ್ರಾಮೀಣ ಮಂಡಲದ ಎಸ್‌ಸಿ ಮೋರ್ಚಾದ ಕಾರ್ಯಕರ್ತರು, ನಗರಸಭಾ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top