• Slide
    Slide
    Slide
    previous arrow
    next arrow
  • ವಿವಿಧ ಸ್ಪರ್ಧೆಗಳಲ್ಲಿ ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ

    300x250 AD

    ಶಿರಸಿ; ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ತಾಲೂಕಿನ ಇಸಳೂರಿನ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ಭಗವದ್ಗೀತಾ ಅಭಿಯಾನದ ಅಂಗವಾಗಿ ನಡೆದ ಶಿರಸಿ ತಾಲೂಕಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆಆಯ್ಕೆಯಾಗಿದ್ದಾರೆ.

    ಭಾಷಣ ಸ್ಪರ್ಧೆಯ ಹಿರಿಯರ ವಿಭಾಗದಲ್ಲಿ ಹತ್ತನೆಯ ತರಗತಿಯ ಕುಮಾರಿ ಅರ್ಚಿತಾ ಎಚ್.ಎಸ್. ಪ್ರಥಮ, ಕಿರಿಯರ ವಿಭಾಗದಲ್ಲಿ ಏಳನೆಯ ತರಗತಿಯ ತ್ರಿಮುಖ ವಿ.ಎಚ್.ಪ್ರಥಮ, ಕಂಠಪಾಠ ಸ್ಪರ್ಧೆಯ ಹಿರಿಯರ ವಿಭಾಗದಲ್ಲಿಎಂಟನೆಯ ತರಗತಿಯ ಅಪೂರ್ವಾ ಭಟ್ ಪ್ರಥಮ ಹಾಗೂ ಕಿರಿಯರ ವಿಭಾಗದಲ್ಲಿ ಏಳನೆಯ ತರಗತಿಯ ಕುಮಾರಿ ಸುನಿಧಿ ಹೆಗಡೆ ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಮುಂದಿನ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top