Slide
Slide
Slide
previous arrow
next arrow

ಜೂನ್ ಮತ್ತು ಜುಲೈ ತಿಂಗಳ ಹಾಲಿನ ಪ್ರೋತ್ಸಾಹ ಧನ ಜಮಾ: ಸುರೇಶ್ಚಂದ್ರ ಕೆಶಿನ್ಮನೆ

300x250 AD

ಶಿರಸಿ: ಜೂನ್ ಮತ್ತು ಜುಲೈ 2022ನೇ ಮಾಹೆಗಳ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹ ಧನವು ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಬ್ಯಾಂಕ್ ಖಾತೆಗೆ ನ. 29 ರ ಮಂಗಳವಾರದಂದು ಜಮಾ ಆಗಿದೆ ಎಂದು ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಕ್ಟೋಬರ್-2022 ನೇ ಮಾಹೆಯ ಪ್ರೋತ್ಸಾಹ ಧನದ ಮಾಹಿತಿಯನ್ನು ನಮ್ಮಿಂದ ಕ್ಷೀರ ಸಿರಿ ತಂತ್ರಾಶದಲ್ಲಿ ಈಗಾಗಲೇ ಅಳವಡಿಸಲಾಗಿದ್ದು, ಜಿಲ್ಲೆಯಾದ್ಯಂತ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ನವೆಂಬರ್-2022 ನೇ ಮಾಹೆಯ ಪ್ರೋತ್ಸಾಹ ಧನದ ಮಾಹಿತಿಯನ್ನು ಪಡೆದು ಕ್ಷೀರ ಸಿರಿ ತಂತ್ರಾಶದಲ್ಲಿ ಅಳವಡಿಸಲಾಗುತ್ತಿದೆ ಎಂದರು. ಅಗಸ್ಟ್, ಸಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳ ರೂ. 5 ಪ್ರೋತ್ಸಾಹ ಧನವು ಕೂಡ ಶೀಘ್ರದಲ್ಲೇ ಹಾಲು ಉತ್ಪಾದಕರ ರೈತರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಜಮಾ ಆಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಹಾಗೂ ಪ್ರೋತ್ಸಾಹಧನ ಜಮಾ ಆಗದ ರೈತರು ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು.

300x250 AD
Share This
300x250 AD
300x250 AD
300x250 AD
Back to top