Slide
Slide
Slide
previous arrow
next arrow

ಭಗವದ್ಗೀತಾ ಭಾಷಣದಲ್ಲಿ ಲಯನ್ಸ್ ಶಾಲೆಯ ಚಿನ್ಮಯ ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಸ್ವರ್ಣವಲ್ಲಿ ಮಹಾಸಂಸ್ಥಾನ ಸೊಂದಾ, ಉತ್ತರಕನ್ನಡ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ, ಕೊಂಕಣ ಶಿಕ್ಷಣ ಸಂಸ್ಥೆ ಇವರ ಸಹಯೋಗದಲ್ಲಿ ಕುಮಟಾದಲ್ಲಿ ನ.30ರಂದು ಏರ್ಪಡಿಸಿದ್ದ, ಪ್ರಾಥಮಿಕ ಶಾಲಾ ವಿಭಾಗದ ಭಗವದ್ಗೀತಾ ಕುರಿತು ಭಾಷಣ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕುಮಾರ ಚಿನ್ಮಯ ಕೆರೆಗದ್ದೆ ದ್ವಿತೀಯ ಸ್ಥಾನ ವಿಜೇತನಾಗಿದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಈ ಮೊದಲು ನ. 28 ರಂದು ಶಿರಸಿ ಲಯನ್ಸ್ ಶಾಲೆಯಲ್ಲಿ ನಡೆದ ತಾಲ್ಲೂಕಾ ಮಟ್ಟದ ಸ್ಪರ್ಧೆಗಳಲ್ಲಿ ಶಿರಸಿ ಲಯನ್ಸ ಶಾಲೆಯ ಚಿನ್ಮಯ ಕೆರೆಗದ್ದೆ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಹತ್ತನೇ ತರಗತಿಯ ಸ್ಪೂರ್ತಿ ಹೆಗಡೆ ಕಂಠಪಾಠದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ಸಂಸ್ಕೃತ ಸಹಶಿಕ್ಷಕರಾದ ಶ್ರೀಮತಿ ವಿದ್ಯಾವತಿ ಭಟ್ ಹಾಗೂ ಕುಮಾರಿ ಯಶಸ್ವಿನಿ ಹೆಗಡೆ ಮಾರ್ಗದರ್ಶನ ನೀಡಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಪಾಲಕರನ್ನು, ತರಬೇತುದಾರರನ್ನು, ಶಿರಸಿ ಲಯನ್ಸ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ವೃಂದ, ಶಿರಸಿ ಲಯನ್ಸ್ ಕ್ಲಬ್ ಬಳಗ ಮತ್ತು ಲಯನ್ಸ ಶಾಲಾ ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top