• Slide
    Slide
    Slide
    previous arrow
    next arrow
  • ಕರವೇ ಗಜಸೇನೆಗೆ ಸದಸ್ಯರ ಸೇರ್ಪಡೆ

    300x250 AD

    ಕುಮಟಾ: ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆಯ ಜಿಲ್ಲಾ ಮಟ್ಟದ ಸಾಮಾನ್ಯ ಸಭೆ ಮತ್ತು ಸದಸ್ಯರ ಸೇರ್ಪಡೆ ಕಾರ್ಯಕ್ರಮ ಇಲ್ಲಿ ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಜಸೇನೆಯ ವಿಭಾಗೀಯ ಅಧ್ಯಕ್ಷ ಉಮೇಶ ಹರಿಕಾಂತ ಮಾತನಾಡಿ, ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ತಾಲೂಕು ಘಟಕದ ಪದಾಧಿಕಾರಿಗಳಿಗೆ ಸಂಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು. ಅವರಲ್ಲಿರುವ ಕೆಲ ಪ್ರಶ್ನೆಗಳಿಗೆ ಸಮರ್ಥವಾಗಿ ಉತ್ತರಿಸಿದ ಅಧ್ಯಕ್ಷರು, ಸಂಘಟನೆಯನ್ನು ಬಲಗೊಳಿಸುವ ಜೊತೆಗೆ ಸಾಮಾಜಿಕ ಹೋರಾಟಗಳನ್ನು ಮಾಡುವಂತೆ ಕರೆ ನೀಡಿದರು.
    ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಮಾರುತಿ ಸಂಕೊಳ್ಳಿ ಮತ್ತು ಜಿಲ್ಲಾ ಉಪಾಧ್ಯಕ್ಷ ನೀಲಕಂಠ ನಾಯ್ಕ ಅವರು ಕೆಲ ಸಲಹೆ, ಸೂಚನೆಗಳನ್ನು ಸಂಘಟನೆಯ ಪದಾಧಿಕಾರಿಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಕೆನರಾಪ್ಲಸ್ ವಾಹಿನಿಯ ಸಂಪಾದಕ ಮತ್ತು ಆಡಳಿತಾಧಿಕಾರಿ ಚರಣರಾಜ್ ನಾಯ್ಕ ಮತ್ತು ಗಜಸೇನೆಯ ವಿಭಾಗೀಯ ಅಧ್ಯಕ್ಷ ಉಮೇಶ ಹರಿಕಾಂತ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
    ಕಾರ್ಯಕ್ರಮದಲ್ಲಿ ಕರವೇ ಗಜಸೇನೆಯ ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top