• Slide
    Slide
    Slide
    previous arrow
    next arrow
  • ಡಿ.6ಕ್ಕೆ ಶಿರಸಿಯಲ್ಲಿ ನೂತನ ಕಾರಾವಿ ಚಿಕಿತ್ಸಾಲಯ ಉದ್ಘಾಟನೆ

    300x250 AD

    ಶಿರಸಿ : ಕಾರ್ಮಿಕರ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಯಡಿಯಲ್ಲಿ ನಗರದ ಟಿ.ಎಸ್.ಎಸ್.ಮಾರ್ಕೆಟ್ ಯಾರ್ಡ್’ನಲ್ಲಿ ನೂತನವಾಗಿ ನಿರ್ಮಿತವಾದ ಕಾರಾವಿ ಚಿಕಿತ್ಸಾಲಯದ ಉದ್ಘಾಟನಾ ಸಮಾರಂಭವನ್ನು ಡಿ.6, ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಘನ ಉಪಸ್ಥಿತಿ ನೀಡಲಿದ್ದಾರೆ. ಚಿಕಿತ್ಸಾಲಯದ ಉದ್ಘಾಟನೆಯನ್ನು ಕಾರ್ಮಿಕ ಸಚಿವ ಅರಬೈಲ್ ಶಿವರಾಮ್ ಹೆಬ್ಬಾರ್ ನೆರವೇರಿಸಲಿದ್ದಾರೆ.
    ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಅನಂತಕುಮಾರ್ ಹೆಗಡೆ, ಆರ್.ವಿ.ದೇಶಪಾಂಡೆ, ಬಸವರಾಜ್ ಹೊರಟ್ಟಿ, ಶಾಸಕ ದಿನಕರ ಶೆಟ್ಟಿ, ರೂಪಾಲಿ ನಾಯ್ಕ್ ಶಾಂತಾರಾಮ್ ಸಿದ್ದಿ, ಗಣಪತಿ ಉಳ್ವೇಕರ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top