• Slide
    Slide
    Slide
    previous arrow
    next arrow
  • ಜಿಲ್ಲಾಮಟ್ಟದ ಚರ್ಚಾ ಸ್ಪರ್ಧೆ: ಸರಸ್ವತಿ ಪಿಯು ಕಾಲೇಜ್ ವಿದ್ಯಾರ್ಥಿನಿಯರ ಅಮೋಘ ಸಾಧನೆ

    300x250 AD

    ಕುಮಟಾ : ಉತ್ತರ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ. ಕುಮಟಾ ಇವರು ಡಿ.05, ಸೋಮವಾರದಂದು, ಹನುಮಂತ ಬೆಣ್ಣೆ ಸರಕಾರಿ ಪದವಿ ಪೂರ್ವ ಕಾಲೇಜು ನೆಲ್ಲಿಕೇರಿಯಲ್ಲಿ ಏರ್ಪಡಿಸಿದ, ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ ಭಂಡಾರ್ಕರ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಕುಮಾರಿ ಅಕ್ಷತಾ ಶಾನಭಾಗ ದ್ವಿತೀಯ ಸ್ಥಾನವನ್ನು ಹಾಗೂ ಕುಮಾರಿ ಗ್ರೀಷ್ಮಾ ಗಾವಡಿ ತೃತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
    ಇವರ ಈ ಅತ್ಯುತ್ತಮ ಸಾಧನೆಗೆ ಸಂಸ್ಥೆಯ ಗೌರವಾನ್ವಿತ ಆಡಳಿತ ಮಂಡಳಿಯವರು, ಪ್ರಾಂಶುಪಾಲ ಕಿರಣ್ ಭಟ್ ಹಾಗೂ ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ ಮತ್ತು ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top