Slide
Slide
Slide
previous arrow
next arrow

ಡಿ.೧೭ ರಂದು ವಿವಿಧ ಜಾನಪದ ತಂಡದೊಂದಿಗೆ ಶಿರಸಿಯಲ್ಲಿ ಅರಣ್ಯವಾಸಿಗಳಿಂದ ಬೃಹತ್ ರ‍್ಯಾಲಿ

300x250 AD

ಶಿರಸಿ: ಬಗೆಹರಿಯದ ಅರಣ್ಯ ಭೂಮಿ ಹಕ್ಕು ವಂಚಿತರ ಹಕ್ಕಿನ ನಿರೀಕ್ಷೆ ಹಾಗೂ ಸುಪ್ರಿಂ ಕೋರ್ಟಿನ ಆದೇಶ ಆಗುವ ಆತಂಕದಲ್ಲಿ ಡಿಸೆಂಬರ್ ೧೭ ರಂದು ಶಿರಸಿಯಲ್ಲಿ ಸಮಸ್ಯೆಗಳನ್ನ ಮುಂದಿಟ್ಟು ಹೆಚ್ಚಿನ ಒತ್ತಡ ಹೇರುವ ತಂತ್ರಗಾರಿಕೆಯ ಮೇರೆಗೆ ರಾಜ್ಯ ಮಟ್ಟದ ಅರಣ್ಯವಾಸಿಗಳ ರ‍್ಯಾಲಿ ಹಾಗು ಅರಣ್ಯವಾಸಿಗಳನ್ನ ಉಳಿಸಿ ಎಂಬ ಶಿರೋನಾಮೆಯ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅವರು ಇಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕಾರ್ಯಕ್ರಮಕ್ಕೆ ಕರ್ನಾಟಕ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ, ಮಾಜಿ ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್, ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ, ತಂಜೀಮ್ ಅಧ್ಯಕ್ಷರಾದ ಇನಾಯತ್ ಸಾಬಂದ್ರಿ ಹಾಗೂ ಜಿಲ್ಲೆಯ ಶಾಸಕರುಗಳನ್ನ ಹೋರಾಟಗಾರರ ವೇದಿಕೆಯು ಆಹ್ವಾನಿಸಿದೆ ಹಾಗೂ ವಿಶೇಷ ಆಮಂತ್ರಿತರಾಗಿ ಸಾಮಾಜಿಕ ಹೋರಾಟಗಾರರಾದ ಕಾಗೋಡ ತಿಮ್ಮಪ್ಪ ಅವರು ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಅವರು ಉಪಸ್ಥಿತರಿರುವರೆಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ರಾಜ್ಯಾದ್ಯಂತ ೧೬ ವಿವಿಧ ಜಿಲ್ಲೆಗಳಿಂದ ಅರಣ್ಯವಾಸಿಗಳು ಭಾಗವಹಿಸುವ ರ‍್ಯಾಲಿಯಲ್ಲಿ ಅರಣ್ಯವಾಸಿಗಳ ಪ್ರಮುಖ ೫ ಬೇಡಿಕೆಗಳನ್ನ ಹೋರಾಟಗಾರರ ವೇದಿಕೆಯು ಮಂಡಿಸಲಿದೆ. ಅಲ್ಲದೇ, ಸಂಘಟನೆಯ ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ ೧೨೯ ಗ್ರಾಮ ಪಂಚಾಯತಗಳಲ್ಲಿ ಪೂರ್ವಭಾವಿ ಸಭೆ ಹಾಗೂ ಕರ್ನಾಟಕದ ೧೨ ಜಿಲ್ಲೆಗಳಲ್ಲಿ ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಜಾಗೃತ ಸಭೆ ಸಂಘಟಿಸಲಾಗಿದೆ ಎಂದು ವೇದಿಕೆಯ ಪ್ರಕಟಣೆಯು ತಿಳಿಸಿದೆ.

300x250 AD

ಈ ಸಂದರ್ಭದಲ್ಲಿ ಇಬ್ರಾಹಿಂ ಗೌಡಳ್ಳಿ, ಮಂಜುನಾಥ ನಾಯ್ಕ ಹಳ್ಳಿಬೈಲ್, ಚಿನ್ಮಯ್ ನಾಯ್ಕ ಸಣ್ಣಳ್ಳಿ, ತಿಮ್ಮಪ್ಪ ಬೀರ ನಾಯ್ಕ ಹಳ್ಳಿಬೈಲ್ ಮುಂತಾದವರು ಉಪಸ್ಥಿತರಿದ್ದರು.

ಮೆರವಣಿಗೆ:ರಾಜ್ಯಾದ್ಯಂತ ಅರಣ್ಯವಾಸಿ, ಆದಿವಾಸಿ, ಜಾನಪದ ನೃತ್ಯ, ವಾದ್ಯದೊಂದಿಗೆ ಡಿ. ೧೭ ರಂದು ಮಧ್ಯಾಹ್ನ ೩ ಗಂಟೆಗೆ ವಾದ್ಯದೊಂದಿಗೆ ಶಿರಸಿಯ ಮಾರಿಕಾಂಬ ದೇವಾಲಯ ಎದುರಿನಿಂದ ರ‍್ಯಾಲಿ ಪ್ರಾರಂಭವಾಗಲಿದ್ದು, ಸಾಮ್ರಾಟ್ ಏದುರಿನ ಪೋಲೀಸ್ ಗ್ರೌಂಡ್‌ನಲ್ಲಿ ಸಮಾವೇಶವನ್ನು ಸಂಘಟಕರು ಹಮ್ಮಿಕೊಂಡಿದ್ದಾರೆ.

Share This
300x250 AD
300x250 AD
300x250 AD
Back to top