Slide
Slide
Slide
previous arrow
next arrow

ಚೆಸ್ ಪಂದ್ಯಾವಳಿಗೆ ಜಿಲ್ಲೆಯ ಕುವರಿ ನಿಕಿತಾ ಕಾಮತ್ ಆಯ್ಕೆ

300x250 AD

ದಾಂಡೇಲಿ: ನಗರದ ಜನತಾ ವಿದ್ಯಾಲಯ ಮತ್ತು ಬಂಗೂರನಗರ ಪಿಯು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿ, ಇದೀಗ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ಪದವಿ ಶಿಕ್ಷಣ ಪಡೆಯುತ್ತಿರುವ ನಗರದ ನಿಕಿತಾ ಕಾಮತ್ ಮಂಗಳೂರು ವಿಶ್ವವಿದ್ಯಾಲಯದ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡಿ, ಮಂಗಳೂರು ವಿಶ್ವ ವಿದ್ಯಾಲಯದ ಚೆಸ್ ತಂಡಕ್ಕೆ ಆಯ್ಕೆಯಾಗಿ ಕಾಲೇಜಿಗೆ ಹಾಗೂ ನಗರಕ್ಕೆ ಕೀರ್ತಿಯನ್ನು ತಂದಿದ್ದಾಳೆ. ಬೆಂಗಳೂರಿನ ರೇವಾ ವಿಶ್ವ ವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವ ವಿದ್ಯಾಲಯದ ಮಟ್ಟದ ಚೆಸ್ ಪಂದ್ಯಾವಳಿಗೆ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾಳೆ.

ಈಕೆ ನಗರದ ಹೋಟೆಲ್ ಹಾಗೂ ಪ್ರವಾಸೋದ್ಯಮಿ ನವೀನ್ ಕಾಮತ್ ಮತ್ತು ನಿವೇದಿತಾ ಕಾಮತ್ ದಂಪತಿಗಳ ಸುಪುತ್ರಿಯಾಗಿದ್ದಾಳೆ. ಈ ಹಿಂದೆಯು ಜಿಲ್ಲೆ, ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಳು. ಈಕೆಯ ಸಾಧನೆಗೆ ನಗರದ ಗಣ್ಯರನೇಕರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top