Slide
Slide
Slide
previous arrow
next arrow

ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ಆಗ್ರಹ

300x250 AD

ದಾಂಡೇಲಿ: ಮುನ್ಸಿಪಲ್ ಕಾರ್ಮಿಕರ ಖಾಯಂಮಾತಿ ಮತ್ತು ಖಾಯಂಗೊಳಿಸುವ ತನಕ ಸಮಾನ ಕೆಲಸಕ್ಕೆ ಸಮಾನ ವೇತನ, ನೇರ ಪಾವತಿಯಡಿಯಲ್ಲಿ ಪಾವತಿಸಲು ಹಾಗೂ ಕಾರ್ಮಿಕರ ಕಾನೂನು ಸೌಲಭ್ಯ ನೀಡುವ ಬಗ್ಗೆ ಮುಂಬರಲಿರುವ ವಿಧಾನ ಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯು ಗುರುವಾರ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರ ಮೂಲಕ ಶಾಸಕ ಆರ್.ವಿ.ದೇಶಪಾಂಡೆಯವರಿಗೆ ಮನವಿ ಸಲ್ಲಿಸಿದೆ.

ಮನವಿಯಲ್ಲಿ ಪೌರಕಾರ್ಮಿಕರ ಸಮಸ್ಯೆಗಳು ಮತ್ತು ಪೌರಕಾರ್ಮಿಕರಿಗೆ ಕಾನೂನುಬದ್ಧವಾಗಿ ಸಿಗಬೇಕಾದ ಸವಲತ್ತುಗಳು ಹಾಗೂ ಪೌರಕಾರ್ಮಿಕರ ಖಾಯಂಮಾತಿ ಬಗ್ಗೆ ವಿವರಿಸಲಾಗಿದೆ.

300x250 AD

ಈ ಸಂದರ್ಭದಲ್ಲಿ ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಡಿ.ಸ್ಯಾಮಸನ್, ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ರಾಮಾಂಜನೇಯ, ಕಾರ್ಯದರ್ಶಿ ಸೀತಾರಾಮ ನಾಕಡೆ ಹಾಗೂ ಪೌರಕಾರ್ಮಿಕರ ಸಂಘಟನೆಯ ಸದಸ್ಯರು ಇದ್ದರು.

Share This
300x250 AD
300x250 AD
300x250 AD
Back to top