• Slide
    Slide
    Slide
    previous arrow
    next arrow
  • ಅಂಚೆ ಅದಾಲತ್ ಡಿಸೆಂಬರ್ 29ಕ್ಕೆ

    300x250 AD

    ಕಾರವಾರ: ಅಂಚೆ ಇಲಾಖೆಯು 2022ನೇ ಸಾಲಿನ 4ನೇ ತ್ರೈಮಾಸಿಕ ಅಂಚೆ ಅದಾಲತನ್ನು ಡಿಸೆಂಬರ್ 29ರ ಬೆಳಿಗ್ಗೆ 11.00 ಗಂಟೆಗೆ ಅಂಚೆ ಅಧಿಕ್ಷಕರು ಕಾರವಾರ ಇವರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.
    ಈ ಅಂಚೆ ಅದಾಲತ್‌ನಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅಂಚೆ ಸೇವೆಗಳಿಗೆ ಸಂಬಂಧಪಟ್ಟ ಸಲಹೆ, ಸೂಚನೆ ಹಾಗೂ ದೂರುಗಳನ್ನು ಅಂಚೆ ಅಧೀಕ್ಷಕರು, ಕಾರವಾರ ವಿಭಾಗ, ಕಾರವಾರ ಇವರ ಕಾರ್ಯಾಲಯಕ್ಕೆ ಡಿಸೆಂಬರ್ 27ರವರೆಗೆ ತಲುಪುವಂತೆ ಕಳುಹಿಸತಕ್ಕದ್ದು.
    ಈ ವಿಭಾಗೀಯ ಅಂಚೆ ಅದಾಲತ್ ನಲ್ಲಿ ಸಾಮಾನ್ಯ ಮಟ್ಟದ ಅಂದರೆ ಈ ವಿಭಾಗದ ಅಂಚೆ ಕಚೇರಿಗಳಿಂದ ಈಗ ಕೊಡುತ್ತಿರುವ ಸೇವೆಗಳಲ್ಲಿ ಇರುವ ಕೊರತೆಗಳನ್ನು ಮತ್ತು ಅವುಗಳನ್ನು ಸುಧಾರಿಸುವ ಸಲಹೆ ಸೂಚನೆಗಳನ್ನಷ್ಟೇ ಚರ್ಚಿಸಲಾಗುವುದು. ಇಲಾಖೆಯ ಕಾರ್ಯನೀತಿ ಧೋರಣೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಈ ವಿಭಾಗೀಯ ಅಂಚೆ ಅದಾಲತ್‌ನಲ್ಲಿ ಚರ್ಚಿಸಲಾಗುವುದಿಲ್ಲ. ಇಂತಹ ಕಾರ್ಯನೀತಿ ಧೋರಣೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಬೇರೆ ಯಾವುದೇ ಸಮಯದಲ್ಲಿ ಬರೆದು ತಿಳಿಸಿದ್ದಲ್ಲಿ, ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಸಲ್ಲಿಸಲಾಗುವುದು ಎಂದು ಅಂಚೆ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top