Slide
Slide
Slide
previous arrow
next arrow

ಕಲೋತ್ಸವ: ಲಯನ್ಸ್ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಹಾಗೂ ಭಾರತೀಯ ಶಿಕ್ಷಣ ಸಚಿವಾಲಯ ಇವರ ಸಹಯೋಗದಲ್ಲಿ ಪ್ರಸ್ತುತ ವರ್ಷದಲ್ಲಿ ನಡೆಸಲಾದ ಜಿಲ್ಲಾ ಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ನಗರದ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿಯ ಓಂಕಾರ ಕೊಳ್ವೇಕರ್ ಜಾನಪದ ಗೀತೆಯಲ್ಲಿ ಪ್ರಥಮ, 10 ನೇ ತರಗತಿಯ ವಸಿಷ್ಠ ಭಟ್ ವಾದ್ಯ ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಾಸವಿ ಜೋಶಿ ವಾದ್ಯ ಸಂಗೀತದಲ್ಲಿ ದ್ವಿತೀಯ, ಶ್ರೇಯಾ ಬಡಿಗೇರ್ ಜಾನಪದ ನೃತ್ಯದಲ್ಲಿ ದ್ವಿತೀಯ, ಗಗನ ಎಮ್. ನಾಯ್ಕ ಸ್ಥಳೀಯ ಆಟಿಕೆಗಳಲ್ಲಿ ದ್ವಿತೀಯ, ಶುಭಾ ಗುಡಿಗಾರ ಸ್ಥಳೀಯ ಆಟಿಕೆಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಒಟ್ಟೂ 18 ವಿವಿಧ ಸ್ಪರ್ಧೆಗಳಲ್ಲಿ ಲಯನ್ಸ್ ಶಾಲೆಯ ವಿದ್ಯಾರ್ಥಿಗಳು 12 ಸ್ಪರ್ಧೆಗಳಲ್ಲಿ ಭಾಗವಹಿಸಿ 6 ಸ್ಪರ್ಧೆಯಲ್ಲಿ ವಿಜೇತರಾಗಿರುವುದು ಪ್ರಶಂಸನೀಯ. ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರೌಢಶಾಲಾ ಸಹಶಿಕ್ಷಕರಾದ ಶ್ರೀಮತಿ ಸೀತಾ ವಿ ಭಟ್, ಶ್ರೀಮತಿ ದೀಪಾ ಶಶಾಂಕ ಹೆಗಡೆ ಮಾರ್ಗದರ್ಶನ ನೀಡಿದ್ದಾರೆ. ಮಕ್ಕಳ ಈ ಸಕ್ರಿಯ ಭಾಗವಹಿಸುವಿಕೆಗೆ ಹಾಗೂ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ, ಸಹಕರಿಸಿದ ಪಾಲಕರಿಗೆ, ತರಬೇತಿ ನೀಡಿದ ತರಬೇತುದಾರರಿಗೆ, ಲಯನ್ಸ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯ ಶಶಾಂಕ ಹೆಗಡೆ. ಶಿಕ್ಷಕ-ಶಿಕ್ಷಕೇತರ ಬಾಂಧವರು, ಲಯನ್ಸ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top