Slide
Slide
Slide
previous arrow
next arrow

ಗ್ರಾಮೀಣ ಕ್ರೀಡಾಕೂಟ ಯಶಸ್ವಿ

300x250 AD

ಹೊನ್ನಾವರ: ತಾಲೂಕಿನ ಚಕ್ರವರ್ತಿ ಅಕಾಡೆಮಿ ಹಾಗೂ ನೆಹರು ಯುವ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಕ್ರೀಡಾಕೂಟ ಎಸ್.ಡಿ.ಎಂ. ಕಾಲೇಜು ಮೈದಾನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಜಿ.ಪಿ.ಹೆಗಡೆ ಉದ್ಘಾಟಿಸಿದರು. ನಂತರ ಮಾತನಾಡಿ ಮಕ್ಕಳ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖವಾಗಿದೆ. ದೈಹಿಕವಾಗಿ ಮಾನಸಿಕವಾಗಿ ಸದೃಡವಾಗಿಸಲಿದೆ. ಗ್ರಾಮೀಣ ಭಾಗದ ವಿವಿಧ ಕ್ರೀಡೆಯು ಇಂದಿಗೂ ಜನಮನ್ನಣೆ ಪಡೆದಿದೆ ಎಂದರು.

300x250 AD

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಪತಿ ಗೌಡ ವಹಿಸಿದ್ದರು. ಈ ಸಂದರ್ಭದಲ್ಲಿ ಜೋನ ಮಂಡಿಸ್, ರಾಧಾಕೃಷ್ಣ ಚಕ್ರವರ್ತಿ ಅಕಾಡೆಮಿ ಅಧ್ಯಕ್ಷ ಸುನಿಲ್ ಅಂಕೋಲಿಕರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದು ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.

Share This
300x250 AD
300x250 AD
300x250 AD
Back to top