Slide
Slide
Slide
previous arrow
next arrow

ರಾಜ್ಯ ಮಟ್ಟದ ಭಜನಾ ಸ್ಪರ್ಧೆ; ರಾಮಾಂಜನೇಯ ಮಂಡಳಿ ಪ್ರಥಮ

300x250 AD

ಕುಮಟಾ: ಮಿರ್ಜಾನ್‌ನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆದ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯಲ್ಲಿ ತಾಲೂಕಿನ ಕೆಳಗಿನ ಕಂದವಳ್ಳಿಯ ರಾಮಾಂಜನೇಯ ಭಜನಾ ಮಂಡಳಿಯ ಹಾಲಕ್ಕಿ ಸಮಾಜ ಬಾಂಧವರು ಪ್ರಥಮ ಸ್ಥಾನ ಪಡೆದರು.
ರಾಮಾಂಜನೇಯ ಭಜನಾ ಮಂಡಳಿ ತಂಡವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾಗಿರುವ ಶ್ರೀ  ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಹಾಗೂ ಶ್ರೀಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಅಭಿನಂದಿಸಿ, ಆಶೀರ್ವದಿಸಿದರು. ರಾಜ್ಯ ಮಟ್ಟದ ಭಜನಾ ಸ್ಪರ್ಧೆಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಕಳುಹಿಸಿ, ಸ್ಪರ್ಧೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟ ಮಿರ್ಜಾನ್ ಶಾಖಾಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯರಿಗೆ ಭಜನಾ ಮಂಡಳಿ ಧನ್ಯವಾದ ಸಲ್ಲಿಸಿದೆ.

300x250 AD
Share This
300x250 AD
300x250 AD
300x250 AD
Back to top