• Slide
    Slide
    Slide
    previous arrow
    next arrow
  • ಯುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ

    300x250 AD

    ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವು 2022-23 ನೇ ಸಾಲಿನ ಆಝಾಧಿ ಕಾ ಅಮೃತ ಮಹೋತ್ಸವದ ಅಂಗವಾಗಿ 17ನೇ ಯುವ ಪ್ರವಾಸಿ ಭಾರತೀಯ ದಿವಸ ಯುವ ಸಮಾವೇಶವು ಜನವರಿ 8ರಿಂದ 10ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿದೆ. ದೇಶದಾದ್ಯಂತ ಯುವ ಜನರನ್ನು ಮೂರು ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರನ್ನು ರಾಜ್ಯ ಮಟ್ಟದಲ್ಲಿ, ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವದು.
    ಅರ್ಜಿ ಸಲ್ಲಿಸಲು ಬಯಸುವ ಯುವಜನರು ಉತ್ತರ ಕನ್ನಡ ಜಿಲ್ಲೆಯವರಾಗಿರಬೇಕು, 15ರಿಂದ 29 ವಯೋಮಿತಿಯಲ್ಲಿರಬೇಕು, ಪದವಿಧರಾಗಿರಬೇಕು. ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿರಬೇಕು. ಪರಿಣಾಮಕಾರಿಯಾಗಿ ಇಂಗ್ಲೀಷ್ ಮಾತನಾಡುವ ಕೌಶಲ್ಯವನ್ನು ಹೊಂದಿರಬೇಕು. ಯಾವುದೇ ಕ್ರಿಮಿನಲ್ ಕೇಸ್ ಇರಬಾರದು. ವಿಜನ್ ಇಂಡಿಯಾ@ 2047 ಈ ವಿಷಯದ ಬಗ್ಗೆ ಪರಿಣಾಮಕಾರಿಯಾಗಿ ಮಾತನಾಡಬೇಕು, ಇತಿಹಾಸ, ಕಲೆ ಸಂಸ್ಕೃತಿ, ಕ್ರೀಡೆ ಮುಂತಾದ ವಿಷಯದಲ್ಲಿ ಜ್ಞಾನವನ್ನು ಹೊಂದಿರಬೇಕು.
    ಆಸಕ್ತ ಯುವಜನರು ಡಿಸೆಂಬರ್ 23ರ ಒಳಗಾಗಿ ತಮ್ಮ ಹೆಸರನ್ನು ಜಿಲ್ಲಾ ಯುವ ಅಧಿಕಾರಿಗಳು ನೆಹರು ಯುವ ಕೇಂದ್ರ, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ಕಾರವಾರ ಇಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9449992195, 08382226965 ಗೆ ಸಂಪರ್ಕಿಸಿ ಎಂದು ಜಿಲ್ಲಾ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top