Slide
Slide
Slide
previous arrow
next arrow

ಎನ್.ಎಸ್.ಹೆಗಡೆ ಕುಂದರಗಿ ನಿಧನಕ್ಕೆ ಕದಂಬ ಸೌಹಾರ್ದ ಸಂಸ್ಥೆ ಸಂತಾಪ

300x250 AD

ಶಿರಸಿ: ಶಿಕ್ಷಣ ಪ್ರೇಮಿಗಳು, ಸಮಾಜ ಸೇವಕರು,  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಅಪಾರ ಧಾರ್ಮಿಕ ಪ್ರಜ್ಞೆಯನ್ನು ಹೊಂದಿದ್ದ   ಎನ್.ಎಸ್.ಹೆಗಡೆ ಕುಂದರಗಿಯವರು ಡಿ.22, ಗುರುವಾರ ಬೆಳಗಿನ ಜಾವ ದೈವಾಧೀನರಾಗಿದ್ದು, ಜಿಲ್ಲೆಯ ಹಲವು ಸಂಘ-ಸಂಸ್ಥೆಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದ ಅವರು ಸಂಘ-ಸಂಸ್ಥೆಗಳನ್ನು ಸ್ಥಾಪಿಸಿದ್ದರು. ಶ್ರೀಯುತರ ನಿಧನವು ತೀವ್ರ ದುಃಖಕರ ವಿಷಯವಾಗಿದೆ ಎಂದು ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ನಿ. ಅಧ್ಯಕ್ಷ ಶಂಭುಲಿಂಗ ಗಣಪತಿ ಹೆಗಡೆ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಂತಾಪ ಸೂಚಿಸಿದ್ದು, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ದಯಪಾಲಿಸಲಿ. ಅವರ ಕುಟುಂಬ ವರ್ಗದವರಿಗೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top