Slide
Slide
Slide
previous arrow
next arrow

ಜ.20ರಂದು ಅಂಕೋಲಾ ಕನ್ನಡ ಸಾಹಿತ್ಯ ಸಮ್ಮೇಳನ

300x250 AD

ಅಂಕೋಲಾ: ಸ್ವಾತಂತ್ರ್ಯ ಹೋರಾಟ, ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಿಕವಾಗಿ ಸಾಕಷ್ಟು ಕೊಡುಗೆಯನ್ನು ನಾಡಿಗೆ ನೀಡಿದ ನೆಲ ಅಂಕೋಲಾ. ಈಗ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ.20ರಂದು ಪಟ್ಟಣದ ನಾಡವರ ಸಮುದಾಯ ಭವನದಲ್ಲಿ ಸ್ವಾಗತ ಸಮಿತಿಯ ಅನುಮತಿಯ ಮೇರೆಗೆ ಆಯೋಜಿಸಲಾಗಿದೆ.
ಈ ಸಮ್ಮೇಳನದಲ್ಲಿ ಕವಿಗೋಷ್ಠಿ, ಅಂಕೋಲೆಗೆ ಸಂಬಂಧಿಸಿದ ವಿಚಾರಗೋಷ್ಠಿಗಳು ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು. ಸಾಹಿತ್ಯ, ಜನಪದ, ಯಕ್ಷಗಾನ ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಅಂಕೋಲಾ ಗುರುತಿಸಿಕೊಂಡಿದೆ. ಈ ಸಮ್ಮೇಳನದಲ್ಲಿ ಹಿರಿ- ಕಿರಿಯ ಸಾಹಿತಿಗಳು, ಕಲಾವಿದರು, ಸಾಹಿತ್ಯಾಸಕ್ತರು, ಕಸಾಪ ಆಜೀವ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸುಗೊಳಿಸಲು ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಗೌರವ ಕಾರ್ಯದರ್ಶಿಗಳಾದ ಜಗದೀಶ ನಾಯಕ ಹೊಸ್ಕೇರಿ, ಜಿ.ಆರ್. ತಾಂಡೇಲ, ಕೋಶಾಧ್ಯಕ್ಷ ಡಾ.ಎಸ್.ವಿ.ವಸ್ತ್ರದ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top