Slide
Slide
Slide
previous arrow
next arrow

ಬಿಜೆಪಿಯಿಂದ ವಾಜಪೇಯಿ ಜನ್ಮದಿನ ಆಚರಣೆ

300x250 AD

ಕಾರವಾರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಕಾರವಾರ ನಗರ ಮಂಡಲ ವತಿಯಿಂದ ನಗರಾಧ್ಯಕ್ಷ ನಾಗೇಶ್ ಕುರುಡೇಕರ್ ಅವರ ನೇತೃತ್ವದಲ್ಲಿ ಹಾಗೂ ಶಾಸಕಿ ರೂಪಾಲಿ ನಾಯ್ಕ್ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಹಾಗೂ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ಕಾರ್ಯಾಲಯದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಅವರ ಜೀವನ ಚರಿತ್ರೆ ಕುರಿತು ಶಾಸಕಿ ರೂಪಾಲಿ, ಮಾಜಿ ಶಾಸಕ ಗಂಗಾಧರ್ ಭಟ್, ಜಿಲ್ಲಾ ಪ್ರಭಾರಿ ಆರತಿ ಗೌಡ, ಜಿಲ್ಲಾ ಉಪಾಧ್ಯಕ್ಷೆ ನಯನ ನಿಲಾವರ್, ಜಿಲ್ಲಾ ವಿಶೇಷ ಆಹ್ವಾನಿತ ಮನೋಜ್ ಭಟ್ ಹಾಗೂ ಪ್ರೊ.ಎಂ.ವಿ.ಹೆಗಡೆ ಮಾತನಾಡಿದರು.
ಇಂದು ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಅಟಲ್ ಜೀಯವರ ನಾಯಕತ್ವ ಮಹತ್ವದ ಪಾತ್ರ ವಹಿಸಿದೆ. ಅವರ ಅಂದಿನ ಮುಂದಾಲೋಚನೆ ಹಾಗೂ ಅಭಿವೃದ್ಧಿಯ ಕನಸನ್ನ ಇಂದಿನ ಮುಖ್ಯಮಂತ್ರಿ ನರೇಂದ್ರ ಮೋದಿಜಿಯವರು ಪೂರ್ಣಗೊಳಿಸಿದ್ದಾರೆ. ಆದರಿಂದ ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ಮೋದಿಯವರ ಸಾಧನೆಯನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗುನಗಿ ಗಣ್ಯರಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು, ಪದಾಧಿಕಾರಿಗಳು, ನಗರಸಭೆ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಿದರು.

300x250 AD
Share This
300x250 AD
300x250 AD
300x250 AD
Back to top