• Slide
    Slide
    Slide
    previous arrow
    next arrow
  • ಅಗಸ್ಟ್ ತಿಂಗಳ ಹಾಲಿನ ಪ್ರೋತ್ಸಾಹ ಧನ ಜಮಾ: ಸುರೇಶ್ಚಂದ್ರ ಕೆಶಿನ್ಮನೆ

    300x250 AD

    ಶಿರಸಿ: ಅಗಸ್ಟ್ 2022ನೇ ಮಾಹೆಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹ ಧನವು ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಬ್ಯಾಂಕ್‌ ಖಾತೆಗೆ ಡಿ.28, ಬುಧವಾರದಂದು ಜಮಾ ಆಗಿದೆ ಎಂದು ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ತಿಳಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ನವೆಂಬರ್-2022‌ ನೇ ಮಾಹೆಯ ಪ್ರೋತ್ಸಾಹ ಧನದ ಮಾಹಿತಿಯನ್ನು ನಮ್ಮಿಂದ ಕ್ಷೀರ ಸಿರಿ ತಂತ್ರಾಶದಲ್ಲಿ ಈಗಾಗಲೇ ಅಳವಡಿಸಲಾಗಿದ್ದು, ಜಿಲ್ಲೆಯಾದ್ಯಂತ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಡಿಸೆಂಬರ್-2022‌ ನೇ ಮಾಹೆಯ ಪ್ರೋತ್ಸಾಹ ಧನದ ಮಾಹಿತಿಯನ್ನು ಪಡೆದು ಕ್ಷೀರ ಸಿರಿ ತಂತ್ರಾಶದಲ್ಲಿ ಅಳವಡಿಸುವ ಕಾರ್ಯ ಆರಂಭವಾಗಲಿದ್ದು, ಸಪ್ಟೆಂಬರ್‌, ಅಕ್ಟೋಬರ್, ನವೆಂಬರ್‌ ತಿಂಗಳುಗಳ ರೂ. 5 ಪ್ರೋತ್ಸಾಹ ಧನವು ಕೂಡ ಶೀಘ್ರದಲ್ಲೇ ಹಾಲು ಉತ್ಪಾದಕರ ರೈತರ ಬ್ಯಾಂಕ್‌ ಖಾತೆಗೆ ಸರ್ಕಾರದಿಂದ ಜಮಾ ಆಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಕರ್ನಾಟಕ ಹಾಲು ಮಹಾ ಮಂಡಳಿ ಬೆಂಗಳೂರಿನ ಕೇಂದ್ರ ಕಚೇರಿಯಿಂದ ಏಪ್ರಿಲ್-2019 ರಿಂದ ನವೆಂಬರ್-2022ನೇ ಮಾಹೆಯವರೆಗೆ ರೂ. 5 ಪ್ರೋತ್ಸಾಹ ಧನ ಜಮಾ ಆಗದ ಹಾಲು ಉತ್ಪಾದಕ ರೈತರ ಯಾದಿಯನ್ನು ಕಳುಹಿಸಿ ಕೊಡಲಾಗಿದ್ದು, ಏಪ್ರಿಲ್-2019 ರಿಂದ ನವೆಂಬರ್-2022 ನೇ ಮಾಹೆಯ ವರೆಗೆ ರೂ. 5 ಪ್ರೋತ್ಸಾಹ ಧನ ಜಮಾ ಆಗದ ಹಾಲು ಉತ್ಪಾದಕ ರೈತರು ಕೂಡಲೇ ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top