• Slide
    Slide
    Slide
    previous arrow
    next arrow
  • ಧಾರವಾಡ ಸಹಕಾರ ಹಾಲು ಒಕ್ಕೂಟದ ಫಲಾನುಭವಿಗಳಿಗೆ ಚೆಕ್‌ ವಿತರಿಸಿದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ

    300x250 AD

    ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದಿಂದ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರಗುಂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಲ್ಯಾಣ ಸಂಘದ ಸದಸ್ಯರುಗಳಾದ ಪ್ರಭಾಕರ ಬಸವಣ್ಣಿ ನಾಯ್ಕ, ಕೆರಿಯಪ್ಪ ಬಿ ನಾಯ್ಕ ಇವರುಗಳು ಮರಣ ಹೊಂದಿದ ಕಾರಣ ಅವರ ವಾರಸುದಾರರಿಗೆ ತಲಾ ರೂ. 10,000/-, ಮೊತ್ತದ ಚೆಕ್‌ಗಳನ್ನು, ವಡ್ಡಿನಗದ್ದೆ ಹಾಲು ಉತ್ಪಾದಕರ ಸಹಕಾರ ಸಂಘದ ವೆಂಕಟರಮಣ ಹುಲಿಯಾ ನಾಯ್ಕ ಇವರ ಆಕಳು ಮರಣ ಹೊಂದಿದ ಕಾರಣ ಜಾನುವಾರು ವಿಮಾ ಯೋಜನೆಯ ಅಡಿಯಲ್ಲಿ ರೂ.40,000/- ಮೊತ್ತದ ಚೆಕ್‌ನ್ನು ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಧಾರವಾಡ ಸಹಕಾರ ಹಾಲು ಒಕ್ಕೂಟದ ನಗರದ ಅಗಸೇಬಾಗಿಲಿನ ಕಚೇರಿಯಲ್ಲಿ ವಿತರಿಸಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಲವು ಭಾಗಗಳಲ್ಲಿ ಈಗ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬರುತ್ತಿದ್ದು, ಜಿಲ್ಲೆಯಾದ್ಯಂತ ಪಶು ಸಂಗೋಪನಾ ಇಲಾಖೆಯ ವತಿಯಿಂದ ಜಾನುವಾರುಗಳಿಗೆ ಚರ್ಮಗಂಟು ರೋಗ ಬರದಂತೆ ಲಸಿಕೆಯನ್ನು ನೀಡಲಾಗುತ್ತಿದ್ದು, ರೈತರು ಮುಂಜಾಗ್ರತಾ ಕ್ರಮವಾಗಿ ಹತ್ತಿರದ ಪಶು ವೈದಾಧಿಕಾರಿಗಳನ್ನು ಹಾಗೂ ಪಶು ಸಂಗೋಪನಾ ಇಲಾಖೆಯನ್ನು ಕೂಡಲೇ ಸಂಪರ್ಕಿಸಿ ತಮ್ಮ ತಮ್ಮ ಜಾನುವಾರುಗಳಿಗೆ ಪಾಕ್ಸ್‌ ವೈರಸ್‌ ಲಸಿಕೆಯನ್ನು ಹಾಕಿಸಿಕೊಳ್ಳಬೇಕು, ಹಾಗೆಯೇ ಹೈನುಗಾರರು ಜಾನುವಾರುಗಳ ಚರ್ಮಗಂಟು ರೋಗಕ್ಕೆ ಅನೇಕ ನಾಟಿ ಔಷಧಿಗಳು ದೊರೆಯುತ್ತಿದ್ದು ತಮ್ಮ ಹತ್ತಿರದ ಪಶು ನಾಟಿ ವೈದ್ಯರನ್ನು ಕೂಡ ಸಂಪರ್ಕಿಸಿ ಚರ್ಮಗಂಟು ರೋಗ ಬರದಂತೆ ನಾಟಿ ಔಷಧಗಳನ್ನು ಪಡೆದು, ಕೊಟ್ಟಿಗೆ ಹಾಗೂ ಜಾನುವಾರುಗಳ ಸ್ವಚ್ಛತೆಯ ಕಡೆಗೆ ಗಮನಹರಿಸಬೇಕೆಂದು ಸೂಚಿಸಿದರು.
    ಈ ಸಂದರ್ಭದಲ್ಲಿ ಧಾರವಾಡ ಸಹಕಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಮೌನೇಶ ಎಂ ಸೋನಾರ, ಶಿರಸಿ ಉಪವಿಭಾಗದ ಗುರುದರ್ಶನ ಭಟ್‌, ವಿಸ್ತರಣಾ ಸಮಾಲೋಚಕರುಗಳಾದ ಅಭಿಷೇಕ ನಾಯ್ಕ, ಜಯಂತ ಪಟಗಾರ, ಹಾಲು ಉತ್ಪಾದಕರ ಸಹಕಾರ ಸಂಘಗಳ ಕಲ್ಯಾಣ ಸಂಘದ ಫಲಾನುಭವಿಗಳು, ಹಾಲು ಉತ್ಪಾದಕ ರೈತರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top