Slide
Slide
Slide
previous arrow
next arrow

ಜ್ಞಾನಯೋಗಾಶ್ರಮದ ಸಿದ್ದೇಶ್ವರ‌ ಸ್ವಾಮೀಜಿ‌ ಲಿಂಗೈಕ್ಯ

300x250 AD

ವಿಜಯಪುರ: ನಡೆದಾಡುವ ದೇವರು ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಸೋಮವಾರ ಮಧ್ಯಾಹ್ನದಿಂದಲೇ ಅವರ ದೇಹಸ್ಥಿತಿ ಬಿಗಡಾಯಿಸುತ್ತ ಬಂದಿದ್ದು, ಉಸಿರಾಟ ಮತ್ತು ನಾಡಿಮಿಡಿತ ಏರುಪೇರಾಗಿ ಸೋಮವಾರ ರಾತ್ರಿ ಅವರು ಕೊನೆಯುಸಿರೆಳೆದರು.

ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ಧಗೊಂಡಪ್ಪ ಇವರ ಬಾಲ್ಯದ ಹೆಸರು.

300x250 AD

ಅತ್ಯಂತ ಸರಳ ಜೀವನ ಮತ್ತು ವಿದ್ವತ್ಪೂರ್ಣ ಪ್ರವಚನದಿಂದಾಗಿ ಕೊಟ್ಯಂತರ ಜನರಿಂದ ನಡೆದಾಡುವ ದೇವರು ಎಂದೇ ಕರೆಸಿಕೊಂಡಿದ್ದ ಇವರು, ಅತ್ಯಂತ ಸರಳ ರೀತಿಯಲ್ಲಿ ಬದುಕಿನ ಕುರಿತು ಪ್ರವಚನ ನೀಡುತ್ತಿದ್ದರು.

ಕಳೆದ ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

Share This
300x250 AD
300x250 AD
300x250 AD
Back to top