Slide
Slide
Slide
previous arrow
next arrow

ಅಟಲ್ ಭಾಷಣ ಸ್ಪರ್ಧೆ; ಭಾಗ್ಯ ಹೆಗಡೆ ಪ್ರಥಮ

300x250 AD

ಶಿರಸಿ: ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಗರದ ಪಂಡಿತ ದೀನ್ ದಯಾಳ ಭವನದಲ್ಲಿ ಜಿಲ್ಲಾ ಮಟ್ಟದ ಅಟಲ್ ಭಾಷಣ ಸ್ಪರ್ಧೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ನಾಯಕ ನೇತೃತ್ವದಲ್ಲಿ ನಡೆಯಿತು.
ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಶಾಲ ಮರಾಠೆ, ಗಣ್ಯರನ್ನು ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶ ಹಾಗೂ ಸ್ಪರ್ಧೆಯ ನಿಯಮವನ್ನು ತಿಳಿಸಿಕೊಟ್ಟರು. ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ನಾಯಕ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಸಾಧನೆಗಳನ್ನು ಹಾಗು ವಿಶ್ವ ಗುರು ಆಗುವಲ್ಲಿ ಭಾರತದ ಹೆಜ್ಜೆಯನ್ನು ತಿಳಿಸುತ್ತ ಡಿಜಿಟಲ್ ಇಂಡಿಯಾ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಮಟ್ಟದ ಅಟಲ್ ಭಾಷಣ ಸ್ಪರ್ಧೆಗೆ ಚಾಲನೆ ನೀಡಿದರು. 40ಕ್ಕೂ ಹೆಚ್ಚು ಸ್ಪರ್ದಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಶಿರಸಿಯ ಭಾಗ್ಯ ಹೆಗಡೆ ಪ್ರಥಮ ಸ್ಥಾನ, ಪ್ರಸನ್ನ ದ್ವಿತೀಯ ಹಾಗೂ ಗೌತಮ್ ಭಟ್ಟ ತೃತೀಯ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಯುವಮೋರ್ಚಾ ನಗರ ಅಧ್ಯಕ್ಷ ನಾಗರಾಜ ನಾಯ್ಕ ಕಾರ್ಯಕ್ರಮದ ವಂದನಾರ್ಪಣೆ ಮಾಡಿದರು. ಯುವಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ರವಿ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಗುರುಪ್ರಸಾದ ಹೆಗಡೆ, ಜಿಲ್ಲಾ ಮಾಧ್ಯಮ ಸಹ ವಕ್ತಾರ ಸದಾನಂದ ಭಟ್ಟ ಮತ್ತು ಯುವಮೋರ್ಚಾ ಜಿಲ್ಲಾ ಹಾಗೂ ಶಿರಸಿ ನಗರ, ಗ್ರಾಮೀಣ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top