Slide
Slide
Slide
previous arrow
next arrow

ಪ್ರತಿಭಾ ಕಾರಂಜಿ: ಜನತಾ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

300x250 AD

ದಾಂಡೇಲಿ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನಡೆದ ಧಾರ್ಮಿಕ ಪಠಣ ಸ್ಪರ್ಧಾ ಕಾರ್ಯಕ್ರಮದಲ್ಲಿ ನಗರದ ಜನತಾ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಆರಾಧನಾ ನಾಯಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾಳೆ.
ಕವಾಲಿ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿ ರಿಹಾನ್ ಶೇಖ್, ಫೈಝಾನ್ ಶೆಖ್, ಪುನೀತ್ ಬೆಳ್ಳಿಗಟ್ಟಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಾದ ಮಹಮ್ಮದ್ ಅಜೀಮ್ ಮಕಂದಾರ, ರಿಹಾನ್ ಮಕಂದಾರ, ಮಹಮ್ಮದ್ ತಾಬೀಶ್ ಕಿರಿಗೇರಿ ಇವರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿ ಶಾಲೆಗೆ ಮತ್ತು ನಗರಕ್ಕೆ ಕೀರ್ತಿಯನ್ನು ತಂದಿದ್ದಾರೆ.
ಇದೇ ಬರುವ ಜ.8ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಈ ವಿದ್ಯಾರ್ಥಿಗಳಿಗೆ ಜನತಾ ಸಂಯುಕ್ತ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಎಂ.ಎಸ್.ಇಟಗಿಯವರು ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಕಿಶೋರ ಕಿಂದಳ್ಕರ್, ಶಾಲಾ ಶಿಕ್ಷಕರಾದ ಎಂ.ಬಿ.ಅರವಳ್ಳಿ, ರೆಹನಾ ಮನ್ಸೂರಿ, ಅಬ್ದುಲ್ ರಜಾಕ್ ಭಾಗವಾನ್ ಮತ್ತು ಶಂಕರ್ ಕಿಲ್ಲೆಕರ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top