Slide
Slide
Slide
previous arrow
next arrow

ಸರಸ್ವತಿ‌ ಪಿಯು ಕಾಲೇಜಿನಲ್ಲಿ ಮೂರು ದಿನಗಳ ‘ಅನ್ವೇಷಣಾ-2023’

300x250 AD

ಕುಮಟಾ : ತಾಲೂಕಿನ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಹಾಗೂ ವಿಧಾತ್ರಿ ಅಕಾಡೆಮಿ ಇದರ ಸಹಭಾಗಿತ್ವದಲ್ಲಿ ಬಿ.ಕೆ ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಜನವರಿ 11,12,13 ರಂದು ಮೂರು ದಿನಗಳ ಕಾಲ “ಅನ್ವೇಷಣಾ-2023” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕುರಿತಾಗಿ ಸುದ್ದಿಗೋಷ್ಟಿಯಲ್ಲಿ‌ ತಿಳಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಮುರಳೀಧರ ಪ್ರಭು ಮಕ್ಕಳಲ್ಲಿ ಕೇವಲ ಹೇಳಿಕೊಟ್ಟಿದ್ದನ್ನು ಬರೆಯುವ ರೂಢಿ ಬೆಳೆಯುತ್ತಿದೆ. ಅದನ್ನು ತಪ್ಪಿಸಿ ಅನ್ವೇಷಣೆಯ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂಬ ಆಶಯದೊಂದಿಗೆ ಸಂಸ್ಥೆಯು ವಿನೂತನವಾಗಿ ಕಾರ್ಯಕ್ರಮ ರೂಪಿಸುತ್ತಿದೆ. ಪುಸ್ತಕದ ಓದು ಕಡಿಮೆಯಾಗುತ್ತಿದೆ, ಸಾಮಾನ್ಯ ಸಾಹಿತ್ಯದ ಓದಿನ ಕುರಿತಾಗಿ ಆಸಕ್ತಿ ಕಳೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದಿನ ಅಭಿರುಚಿ ಹೆಚ್ಚಿಸಲು ಈ ಪ್ರಯತ್ನ ಮಾಡಲಾಗಿದೆ. ಸಾರ್ವಜನಿಕರಿಗೆ ಈ ಸಂದರ್ಭದಲ್ಲಿ ಪುಸ್ತಕ ಖರೀದಿಗೆ ಅವಕಾಶ ನೀಡಲಾಗಿದೆ. ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಹಾಗೂ ವಾಣಿಜ್ಯ ವಿಷಯಗಳ ಕುರಿತಾಗಿ ಚಟುವಟಿಕೆ ಏರ್ಪಡಿಸಿ ಅವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡಕ್ಕೆ ಬಹುಮಾನವನ್ನೂ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಶೈಕ್ಷಣಿಕ ಪ್ರಕ್ರಿಯೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗಿರಬೇಕು. ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅನುಕೂಲವಾಗುವಂತೆ ಎಲ್ಲ ಚಟುವಟಿಕೆಗಳನ್ನು ಸಂಸ್ಥೆ ಹಮ್ಮಿಕೊಳ್ಳುತ್ತಿದೆ ಎಂದರು.

300x250 AD

ಈ ಸಂದರ್ಭದಲ್ಲಿ ಎಲ್ಲರನ್ನೂ ಸ್ವಾಗತಿಸಿದ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಕಿರಣ ಭಟ್ಟ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿದರು. ರಾಜ್ಯದಲ್ಲಿಯೇ ಹೆಸರಾಂತ ಪುಸ್ತಕ ಮಾರಾಟ ಮಳಿಗೆಯಾದ ಸಪ್ನಾ ಬುಕ್ ಹೌಸ್, ಬೆಂಗಳೂರು ಇವರ ಸಹಕಾರದಿಂದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಜಾತ್ರೆಯು ನಡೆಯುತ್ತದೆ. ಕುಮಟಾ, ಹೊನ್ನಾವರ, ಅಂಕೋಲಾ ಹಾಗೂ ಉತ್ತರ ಕನ್ನಡ ಜಿಲ್ಲೆಯ ಇತರ ತಾಲ್ಲೂಕಿನ ಜನತೆಗೆ ವಿಶೇಷ ರಿಯಾಯಿತಿ ದರದಲ್ಲಿ ಪುಸ್ತಕಗಳು ಲಭ್ಯವಿರಲಿದೆ. ಈ ಮೂರು ದಿನಗಳ ಕಾಲ ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟದ ಮಳಿಗೆ ಸಾರ್ವಜನಿಕರಿಗೆ ತೆರೆದಿರುತ್ತದೆ. ವಿಜ್ಞಾನ, ವಾಣಿಜ್ಯ, ಕಲೆ, ಸಂಸ್ಕೃತಿ, ಸಾಹಿತ್ಯ, ಹೀಗೆ ಹಲವಾರು ವಿಷಯಗಳಿಗೆ ಸಂಬಂಧಿಸಿದ ಅಪಾರವಾದ ಪುಸ್ತಕಗಳು ಸಿಗಲಿವೆ. ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಾರ್ವಜನಿಕರಲ್ಲಿ ವಿನಂತಿಸಿದರು.

Share This
300x250 AD
300x250 AD
300x250 AD
Back to top