Slide
Slide
Slide
previous arrow
next arrow

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ: ಚಂದನ ವಿದ್ಯಾರ್ಥಿನಿ ಸಾಧನೆ

300x250 AD

ಶಿರಸಿ: ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ 9ನೇ ವರ್ಗದ ವಿದ್ಯಾರ್ಥಿನಿ ಪ್ರತೀಕ್ಷಾ ಭಟ್ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ. ಈ ಸ್ಫರ್ಧೆಯಲ್ಲಿ ರಾಜ್ಯದ 35 ಜಿಲ್ಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು, ‘ರಾಷ್ಟ್ರೀಯ ಭದ್ರತೆ ಮತ್ತು ಏಕತೆಯಲ್ಲಿ ಸಹಬಾಳ್ವೆಯ ಮಹತ್ವ’ ವಿಷಯದ ಮೇಲೆ ಭಾಷಣ ಮಾಡಿದ್ದಳು. ಶಿಕ್ಷಕರಾದ ದಿವ್ಯಾ ಹೆಗಡೆ, ಚಂದ್ರಾವತಿ ಪೂಜಾರಿ ಹಾಗೂ ಸಿಂಧೂರ್ ಭಟ್ ಇವರುಗಳು ರಾಜ್ಯ ಮಟ್ಟದ ಸ್ಫರ್ಧೆಗೆ ಮಾರ್ಗದರ್ಶನ ನೀಡಿದ್ದರು. ಪ್ರತೀಕ್ಷಾಳ ಈ ಸಾಧನೆಗೆ ಕಾರ್ಯದರ್ಶಿ ಎಲ್ ಎಂ ಹೆಗಡೆ, ಅಧ್ಯಕ್ಷರಾದ ಎಸ್ ಆರ್ ಹೆಗಡೆ, ಆಡಳಿತಾಧಿಕಾರಿಣಿ ವಿದ್ಯಾ ನಾಯ್ಕ್ ,ಆಡಳಿತ ಮಂಡಳಿ ಸದಸ್ಯರು , ಶಿಕ್ಷಕ ವೃಂದ,ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದಿಸಿದ್ದಾರೆ .

300x250 AD
Share This
300x250 AD
300x250 AD
300x250 AD
Back to top