Slide
Slide
Slide
previous arrow
next arrow

ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ: ಸ್ವರ್ಣವಲ್ಲೀ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಬೆಂಗಳೂರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಸೋಂದಾ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವೇದಭಾಷ್ಯ ಭಾಷಣ ಸ್ಪರ್ದೆಯಲ್ಲಿ ಮಹೇಶ ಭಟ್ ಹಿತ್ಲಕಾರಗದ್ದೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಧರ್ಮ ಶಾಸ್ತ್ರದ ಭಾಷಣ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ಗಾಂವ್ಕರ್ ದ್ವಿತೀಯ ಹಾಗೂ ಈಶ್ವರ ಭಟ್ಟ ತೃತೀಯ ಸ್ಥಾನ ಪಡೆದಿರುತ್ತಾರೆ. ಡಾ. ವಿನಾಯಕ ಭಟ್ ಗುಂಜುಗೋಡು ಹಾಗೂ ಡಾ. ಮಹಾಬಲೇಶ್ವರ ಭಟ್ಟ ಕಿರುಕುಂಭತ್ತಿ ಅವರ ಮಾರ್ಗದರ್ಶನದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಶ್ರೀಗಳು, ಆಡಳಿತ ಮಂಡಳಿ ಸಮಿತಿಯವರು, ಪ್ರಾಚಾರ್ಯರು ಹಾಗೂ ಎಲ್ಲಾ ಅಧ್ಯಾಪಕರು ಸಂತೋಷ ವ್ಯಕ್ತಪಡಿಸಿ‌, ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top