Slide
Slide
Slide
previous arrow
next arrow

ಶಾಸಕರ ಬೇಜವಾಬ್ದಾರಿಯಿಂದ ಸಾರ್ವಜನಿಕ ಕೆಲಸಗಳು ಆಗುತ್ತಿಲ್ಲ: ವಸಂತ ನಾಯ್ಕ

300x250 AD

ಸಿದ್ದಾಪುರ: ಕ್ಷೇತ್ರದ ಶಾಸಕ, ಸಭಾಧ್ಯಕ್ಷರೂ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬೇಜವಾಬ್ದಾರಿಯಿಂದ ತಾಲೂಕಿನಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ಆಗುತ್ತಿಲ್ಲ. ಅವರ ಈ ನಿಲುವನ್ನು ಬ್ಲಾಕ್ ಕಾಂಗ್ರೆಸ್ ಸಮಿತಿಯು ಖಂಡಿಸುತ್ತದೆ ಎಂದು ಅಧ್ಯಕ್ಷ ವಸಂತ ನಾಯ್ಕ ತಿಳಿಸಿದ್ದಾರೆ.
ನಮ್ಮ ತಾಲೂಕಿನ ಯಾವುದೇ ಇಲಾಖೆಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಜನರಿಗೆ ಯಾವುದೇ ರೀತಿಯ ಕೆಲಸಗಳು ಇಲಾಖೆಗಳ ಮಟ್ಟದಲ್ಲಿ ಆಗುತ್ತಿಲ್ಲಾ. ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಕ್ಷಣ ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಅರ್ಧಕ್ಕಿಂತ ಕಡಿಮೆ ಇರುವ ಎಲ್ಲಾ ಇಲಾಖೆಗಳಲ್ಲೂ ಸಿಬ್ಬಂದಿಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ತಾಲೂಕಿನಾದ್ಯಂತ ಚರ್ಮಗಂಟು ರೋಗ ಜಾನುವಾರುಗಳಿಗೆ ವ್ಯಾಪಕವಾಗಿ ಹರಡಿದೆ. ಅನೇಕ ಜಾನುವಾರುಗಳು ಈ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿವೆ. ತಾಲೂಕಿನಲ್ಲಿ ಒಬ್ಬರೇ ಜಾನುವಾರು ಡಾಕ್ಟರ್ ಇದ್ದಾರೆ ಆದ್ದರಿಂದ ಸೂಕ್ತವಾದ ಕ್ರಮವನ್ನು ತೆಗೆದುಕೊಂಡು ತಕ್ಷಣ ಡಾಕ್ಟರ್ ಗಳನ್ನು ನಿಯೋಜಿಸುವ ಮೂಲಕ ಜಾನುವಾರುಗಳನ್ನು ರಕ್ಷಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ತಾಲೂಕಿನಾದ್ಯಂತ ಉಗ್ರವಾದ ಪ್ರತಿಭಟನೆಯನ್ನು ಬ್ಲಾಕ್ ಕಾಂಗ್ರೆಸ್ ಸಮಿತಿಯು ಕೈಗೊಳ್ಳಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top