Slide
Slide
Slide
previous arrow
next arrow

ಡಾ.ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಾರಾಧನಾ ಮಹೋತ್ಸವ ಆಚರಣೆ

300x250 AD

ಕುಮಟಾ: ತಾಲೂಕಿನ ಮಿರ್ಜಾನ್ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಶ್ರೀಆದಿಚುಂಚನಗಿರಿ ಮಠದ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 10ನೇ ವರ್ಷದ ಪುಣ್ಯಾರಾಧನಾ ಮಹೋತ್ಸವವನ್ನು ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು.
ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥಜೀಯವರು ವಿದ್ಯಾಲಯದಲ್ಲಿರುವ ಶ್ರೀಮಹಾಸತಿ ಭೈರವಿ ದೇವಿಗೆ ಮತ್ತು ಸರ್ವ ದೇವತೆಗಳಿಗೆ ಅಭಿಷೇಕ, ಮಹಾಮಂಗಳಾರತಿ ಮಾಡುವ ಮೂಲಕ ಪುಣ್ಯಾರಾಧನೆಗೆ ಚಾಲನೆ ನೀಡಿದರು. ಬಳಿಕ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಮೂರ್ತಿಗೆ ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ದೀಪಾರಾಧನೆ, ನೈವೇದ್ಯ ನಂತರ ಶ್ಲೋಕ ಪಠನೆಯೊಂದಿಗೆ ಮಹಾಮಂಗಳಾರತಿ ನಡೆಸಿದರು.
ವಿದ್ಯಾರ್ಥಿಗಳು ಗುರುಪಾದುಕಾಷ್ಷಕಂ ಪಠಿಸಿದರು. ಅಲ್ಲದೇ ಗುರುಗಳ ಕುರಿತು ಭಜನೆ ಮಾಡಿದರು. ಈ ಸಂದರ್ಭದಲ್ಲಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಲೀನಾ ಎಂ.ಗೊನೇಹಳ್ಲಿ, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ಸಮಸ್ತ ವಿದ್ಯಾರ್ಥಿಗಳು ಉಪಸ್ಥಿತರಿದ್ದು ತೀರ್ಥಪ್ರಸಾದ ಸ್ವೀಕರಿಸಿ ಪುನೀತರಾದರು.

300x250 AD
Share This
300x250 AD
300x250 AD
300x250 AD
Back to top