Slide
Slide
Slide
previous arrow
next arrow

ಎರಡು ಪ್ರತ್ಯೇಕ‌ ಸ್ಥಳಗಳಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ

300x250 AD

ಕಾರವಾರ: ಎರಡು ಪ್ರತ್ಯೇಕ ಘಟನೆಯಲ್ಲಿ ಪ್ರವಾಸಕ್ಕೆ ಬಂದು ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಘಟನೆ ಮುರುಡೇಶ್ವರ ಹಾಗೂ ಗೋಕರ್ಣದಲ್ಲಿ ನಡೆದಿದೆ.

ಗೋಕರ್ಣಕ್ಕೆ ಆಗಮಿಸಿದ್ದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಮೂಲದ ಮಾರುತಿ (20) ಚಂದನ(16), ಮಧುಸೂದನ (11) ಎಂಬುವವರು ಈಜಾಡುವಾಗ ಸುಳಿಗೆ ಸಿಲುಕಿ ಕೊಚ್ಚಿಹೋಗುತ್ತಿದ್ದರು. ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು ಪ್ರವಾಸಿಗರ ಜೀವ ರಕ್ಷಣೆ ಮಾಡಿದ್ದಾರೆ.
ಇನ್ನೊಂದೆಡೆ, ಮುರುಡೇಶ್ವರದಲ್ಲಿ ಇಂತಹದೇ ಘಟನೆ ನಡೆದಿದ್ದು, ಕೋಲಾರದಿಂದ 8 ಜನರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ 19 ವರ್ಷದ ಓರ್ವ ಪ್ರವಾಸಿಗರ ಅಲೆಗೆ ಸಿಲುಕಿ, ಒದ್ದಾಡುತ್ತಿದ್ದ ವೇಳೆ ಲೈಫ್ ಗಾರ್ಡ್ಗಳಾದ ಪ್ರವೀಣ, ಹನುಮಂತ, ವಿಘ್ನೇಶ್, ಶೇಖರ್ ಎಂಬುವವರು ರಕ್ಷಣೆ ಮಾಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top