Slide
Slide
Slide
previous arrow
next arrow

ಕಾಲುಸಂಕ ಮಂಜೂರಿಗೆ ಮನವಿ: ಬಜೆಟ್‌ನಲ್ಲಿ ವಿಶೇಷ ಅನುದಾನ ಬಿಡುಗಡೆಗೆ ಸಿಎಂ ಬೊಮ್ಮಾಯಿ ಘೋಷಣೆ

300x250 AD

ಶಿರಸಿ: ಗುಡ್ಡಗಾಡು ಜಿಲ್ಲೆಯಾದ ಉತ್ತರ ಕನ್ನಡದ ಗ್ರಾಮೀಣ ಭಾಗದ ಸಂಪರ್ಕಕ್ಕೆ ಮುಂದಿನ ವಾರ್ಷಿಕ ಬಜೆಟ್‌ನಲ್ಲಿ ವಿಶೇಷ ಅನುದಾನ ಘೋಷಣೆ ಮಾಡಲಾಗುವುದು. ಜಿಲ್ಲೆಯ ಕಾಲುಸಂಕ ಸಂಪರ್ಕದ ಬೇಡಿಕೆ ಸರಕಾರ ಗಂಭೀರವಾಗಿ ಪರಿಗಣಿಸುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ನೇತೃತ್ವದಲ್ಲಿ ಗುಡ್ಡಗಾಡು ಜಿಲ್ಲೆಯಾಗಿರುವ ಉತ್ತರ ಕನ್ನಡಕ್ಕೆ  ಗ್ರಾಮೀಣ ಭಾಗದ ಸಂಪರ್ಕಕ್ಕಾಗಿ ತೀವ್ರ ಅವಶ್ಯವಿರುವ 500 ಕಾಲುಸಂಕ ಮಂಜೂರಿಗೆ ಘೋಷಣೆ ಮಾಡಬೇಕೆಂದು ಅಗ್ರಹಿಸಿ ಮನವಿ ನೀಡಿದ ಹಿನ್ನೆಲೆಯಲ್ಲಿ  ಮೇಲಿನಂತೆ ಹೇಳಿದರು.

300x250 AD

 ಕಾಲುಸಂಕ ಕೊರತೆಯಿಂದ ಗ್ರಾಮೀಣ ಭಾಗದ ಗುಡ್ಡಗಾಡು ಜನರು ಹಾಗೂ ವಿದ್ಯಾರ್ಥೀಗಳು ದಿನನಿತ್ಯ ಸಂಚಾರದ ಸಮಸ್ಯೆಗಳನ್ನ ಏದುರಿಸುತ್ತಿರುವರು. ಮಳೆಗಾಲದಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರಿಂದಲೇ ರಚಿಸಿಕೊಂಡ ತಾತ್ಕಾಲಿಕ ಕಾಲುಸಂಕದ ಮೇಲಿನ ಓಡಾಟ ಅಪಾಯದಿಂದ ಕೂಡಿದ್ದಾಗಿದೆ ಎಂದು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

Share This
300x250 AD
300x250 AD
300x250 AD
Back to top