Slide
Slide
Slide
previous arrow
next arrow

ಧರಣಿ ನಿರತ ಸ್ಥಳಕ್ಕೆ ಎಂಎಲ್ಸಿ ಉಳ್ವೇಕರ್ ಭೇಟಿ

300x250 AD

ಕಾರವಾರ: ಜಿಲ್ಲಾಧಿಕಾರಿ ಕಚೇರಿ ಎದುರು ಸತತ 5ನೇ ದಿನ ಧರಣಿ ಮುಂದುವರಿಸಿರುವ ತಾಲೂಕಿನ ಶಿರವಾಡದ ಗ್ರಾಮಸ್ಥರನ್ನ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಭೇಟಿಯಾಗಿ ಸಮಸ್ಯೆ ಆಲಿಸಿದರು.
ಅತಿಕ್ರಮಣ ಜಾಗ ಸಕ್ರಮ ಮಾಡಿಕೊಡದ ಕಾರಣ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಲಿಷಾ ಜಿ.ಯಲಕಪಾಟಿ ನೇತೃತ್ವದಲ್ಲಿ ಜ.12ರಂದು ಗ್ರಾಮಸ್ಥರೆಲ್ಲಾ ಸೇರಿ ಶಿರವಾಡದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟಗಾರರ ಬೇಡಿಕೆಗಳನ್ನು ಆಲಿಸಿದ ಅವರು, ಸಮಸ್ಯೆಯ ಬಗ್ಗೆ ಪರಿಶೀಲನೆ ಹಾಗೂ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

300x250 AD
Share This
300x250 AD
300x250 AD
300x250 AD
Back to top