Slide
Slide
Slide
previous arrow
next arrow

ವಿದ್ಯುತ್ ಗುತ್ತಿಗೆದಾರರ ಸಂಘದ ಹಾಲಿ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಹರಿಜನ ನಿಧನ

300x250 AD

ಶಿರಸಿ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಹಾಲಿ ಜಿಲ್ಲಾ ಉಪಾಧ್ಯಕ್ಷರಾಗಿ ಕಳೆದ 3 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಮಳಗಿಯ ಮಂಜುನಾಥ ಹರಿಜನ ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ. ಇವರ ಅಕಾಲಿಕ ನಿಧನಕ್ಕೆ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯರುಗಳು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

ಸಂಘವು ಇವರ ಪ್ರಾಮಾಣಿಕ ಸೇವೆಯಿಂದ ವಂಚಿತವಾದಂತಾಗಿದೆ. ದೇವರು ಇವರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲಿ ಹಾಗೂ ಇವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಉತ್ತರಕನ್ನಡ ಜಿಲ್ಲಾ ಸಮಿತಿಯು ಪ್ರಾರ್ಥಿಸಿದೆ.

300x250 AD
Share This
300x250 AD
300x250 AD
300x250 AD
Back to top