Slide
Slide
Slide
previous arrow
next arrow

ದಾಂಡೇಲಪ್ಪ ಸಹಕಾರಿಯ ಮಾಜಿ ಅಧ್ಯಕ್ಷ ಬಾಲಚಂದ್ರ ನೇರ್ಲೆಕರ್ ವಿಧಿವಶ

300x250 AD

ದಾಂಡೇಲಿ: ತಾಲ್ಲೂಕಿನ ದಾಂಡೇಲಪ್ಪ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕರು ಆಗಿರುವ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತಾಟಗೇರ ನಿವಾಸಿ ಬಾಲಚಂದ್ರ ನೇರ್ಲೆಕರ್ (83) ಅವರು ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಆರೋಗ್ಯದಲ್ಲಿ ಸ್ವಲ್ಪ ಏರಿಳಿತ ಕಂಡುಬರುತ್ತಿದ್ದoತೆಯೆ ತಕ್ಷಣವೇ ನಗರದ ಭಟ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲಿಸಿಕೊಳ್ಳುವಷ್ಟರಲ್ಲಿ ನಿಧನರಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಬಾಲಚಂದ್ರ ನೇರ್ಲೆಕರ್ ಅವರು ಎರಡು ಬಾರಿ ದಾಂಡೇಲಪ್ಪ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಶ್ರಮಯೋಗಿಯೆಂದೆ ಗುರುತಿಸಿಕೊಂಡಿದ್ದ ಅವರು, ಪ್ರಗತಿಪರ ಕೃಷಿಕರೂ ಆಗಿದ್ದರು.
ಅವರು ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿಯಾಗಿರುವ ಮಹಾವೀರ ನೇರ್ಲೆಕರ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಮಗಳು ಮತ್ತು ಅಪಾರ ಸಂಖ್ಯೆಯಲ್ಲಿ ಬಂಧು- ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ತಾಲೂಕಿನ ಗಣ್ಯರನೇಕರು ಹಾಗೂ ದಾಂಡೇಲಪ್ಪ ಕೃಷಿ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top