Slide
Slide
Slide
previous arrow
next arrow

ಮುಂಡಗೋಡದಲ್ಲಿ ಜ.30ಕ್ಕೆ ಅರಣ್ಯ ಅತಿಕ್ರಮಣದಾರರೊಂದಿಗೆ ಚರ್ಚೆ

300x250 AD

ಮುಂಡಗೋಡ: ತಾಲೂಕ ಅರಣ್ಯ ಅತಿಕ್ರಮಣದಾರರೊಂದಿಗೆ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳ ಕುರಿತು  ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ಚರ್ಚಿಸಲಿದ್ದಾರೆ ಎಂದು ತಾಲೂಕ ಅಧ್ಯಕ್ಷ ಶಿವಾನಂದ ಜೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅರಣ್ಯ ಸಿಬ್ಬಂದಿಗಳ ದೌರ್ಜನ್ಯ, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಕುರಿತು ಮಾಹಿತಿ, ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ಜರುಗುವ ಬಜೆಟ್ ಅಧಿವೇಶನದಲ್ಲಿ ಬೆಂಗಳೂರು ಚಲೋ ಹಮ್ಮಿಕೊಳ್ಳುವ ಹಾಗೂ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಯ ಅನುಭೋಗದ ಕ್ಷೇತ್ರಕ್ಕೆ  ಆತಂಕ ಪಡಿಸುವುದಿಲ್ಲ ಎಂಬ ಅರಣ್ಯ ಸಂರಕ್ಷಣಾಧಿಕಾರಿ ನೀಡಿದ ಲಿಖಿತ ಪತ್ರದ ಕುರಿತು, ಅಸಮರ್ಪಕ ಜಿಪಿಎಸ್ ರಶೀದಿ ಹಿಂತಿರುಗಿಸುವ ಹಾಗೂ ಗುರುತಿನ ಪತ್ರ ವಿತರಿಸುವ ಕುರಿತು ಚರ್ಚಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD

ಮುಂಡಗೋಡ ತಾಲೂಕಿನ ಅರಣ್ಯ ಅತಿಕ್ರಮಣದಾರರು ಚರ್ಚೆಯಲ್ಲಿ ಭಾಗವಹಿಸಲು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share This
300x250 AD
300x250 AD
300x250 AD
Back to top