• Slide
    Slide
    Slide
    previous arrow
    next arrow
  • ಕಿಬ್ಬಳ್ಳಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣ ಗಣರಾಜ್ಯ ದಿನಾಚರಣೆ

    300x250 AD

    ಸಿದ್ದಾಪುರ: ತಾಲೂಕಿನ ಶ್ರೀ ಮಹಾಗಣಪತಿ ಪ್ರೌಢಶಾಲೆ ಕಿಬ್ಬಳ್ಳಿಯಲ್ಲಿ ಅರ್ಥಪೂರ್ಣವಾಗಿ ಗಣರಾಜ್ಯ ದಿನವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ನಾಗಪತಿ ಭಟ್ ಧ್ವಜಾರೋಹಣವನ್ನು ನೆರವೇರಿಸಿ ಧ್ವಜಾರೋಹಣ ಸಂದೇಶವನ್ನು ನೀಡಿದರು. ನಂತರ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ನಾಗಪತಿ ಎನ್. ಭಟ್ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವೇದಾವತಿ ಆರ್. ಶೇಟ್ ಆಡಳಿತ ಮಂಡಳಿಯ ಸದಸ್ಯರಾದ ಶಂಕರ್ ನಾರಾಯಣ್ ವೆಂಕಟ್ರಮಣ ಹೆಗಡೆ ಕಿಬ್ಬಳ್ಳಿ. ದೈಹಿಕ ಶಿಕ್ಷಕರಾದ ಕೆ.ಟಿ. ನಾಯ್ಕ, ಮುಖ್ಯಾಧ್ಯಾಪಕ ಜಿ.ವಿ. ಹೆಗಡೆ ಹಿರಿಯ ಶಿಕ್ಷಕರಾದ ಶ್ರೀಮತಿ ಅನಿತಾ ಸಿರ್ಸಿಕರ್ ವೇದಿಕೆ ಮೇಲೆ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ಲಘು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಹ ಶಿಕ್ಷಕ ಶ್ರೀಧರ್ ಹೆಗಡೆ ಕಾರ್ಯಕ್ರಮವನ್ನು ನಿರ್ವಹಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top