Slide
Slide
Slide
previous arrow
next arrow

ಗೋಳಿ ಪ್ರೌಢಶಾಲೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ

300x250 AD

ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಸಿದ್ಧಿವಿನಾಯಕ ವಿದ್ಯಾಪ್ರಸಾರ ಸಮಿತಿಯ ಅಧ್ಯಕ್ಷ ಎಂ.ಎಲ್. ಹೆಗಡೆ ಹಲಸಿಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಲ್ಲಿ ದೇಶದ ಬಗೆಗಿನ ಗೌರವ ಇನ್ನೂ ಹೆಚ್ಚಾಗಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಮಯದಲ್ಲಿ ನೆಗ್ಗು ಗ್ರಾಮ ಪಂಚಾಯತದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಆಚಾರಿ, ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಮತಿ ಮಹಾಲಕ್ಷ್ಮೀ ಗೌಡ ಮಳಲಿ, ಕೋಶಾಧ್ಯಕ್ಷ ರಮೇಶ್ ಭಟ್ ಅಬ್ಬಿಹದ್ದ, ಸದಸ್ಯ ಸಿ.ಎಸ್. ಹೆಗಡೆ ನೇರಲಹದ್ದ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಮಕ್ಕಳ “ಕುಸುಮ” ಹಸ್ತ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಶಾಲೆಯ ಮುಖ್ಯಾಧ್ಯಾಪಕರಾದ ನಾರಾಯಣ ದೈಮನೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಗಣೇಶ ಜಿ. ಹೆಗಡೆ ಬಹುಮಾನ ವಿತರಣೆ ಕಾರ್ಯಕ್ರಮ ನಿರ್ವಹಿಸಿದರು ರೂಪೇಶ್ ಚವ್ಹಾಣ ವಂದಿಸಿದರು. ಪಿ.ಮಂಜಪ್ಪ ಕಾರ್ಯಕ್ರಮ ನಿರೂಪಿಸಿದರು.

300x250 AD
Share This
300x250 AD
300x250 AD
300x250 AD
Back to top