• Slide
    Slide
    Slide
    previous arrow
    next arrow
  • ಕೋಟೆ ಹನುಮಂತ ಸ್ವಾಮಿ ವರ್ಧಂತಿ ಉತ್ಸವದಲ್ಲಿ ಸಚಿವ ಹೆಬ್ಬಾರ್ ಭಾಗಿ

    300x250 AD

    ಯಲ್ಲಾಪುರ:ತಾಲೂಕಿನ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಾಲಗುಳಿ ಗ್ರಾಮದ ಕೋಟೆ ಹನುಮಂತ ಸ್ವಾಮಿ ದೇವಾಲಯದ ವರ್ಧಂತಿ ಉತ್ಸವದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭಾಗಿಯಾಗಿ, ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

    ದೇವಾಲಯದ ಆವರಣದಲ್ಲಿ ಆಯೋಜಿಸಿದ ಭಜನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಾವು ಸಹ ಭಕ್ತಾದಿಗಳೊಂದಿಗೆ ಭಕ್ತಿಪೂರ್ವಕವಾಗಿ ಭಜನೆಗೆ ತಾಳ ಹಾಕಿದರು.

    300x250 AD

    ಈ ಸಂದರ್ಭದಲ್ಲಿ ಸಚಿವರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ್, ಪ್ರಮುಖರಾದ ವಿಜಯ ಮಿರಾಶಿ, ಬಾಲಕೃಷ್ಣ ನಾಯಕ, ಗ್ರಾಮಪಂಚಾಯತ ಅಧ್ಯಕ್ಷರಾದ ವಿಶ್ವೇಶ್ವರ ಭಟ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಕೈಟಕರ್ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಗ್ರಾಮಪಂಚಾಯತ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top