• Slide
    Slide
    Slide
    previous arrow
    next arrow
  • ಧಾರವಾಡ ಸಹಕಾರ ಹಾಲು ಒಕ್ಕೂಟದ ಫಲಾನುಭವಿಗಳಿಗೆ ಚೆಕ್‌ ವಿತರಿಸಿದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ

    300x250 AD

    ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದಿಂದ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಲಸಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಶ್ರೀಪಾದ ಗೋಪಾಲ ಭಟ್‌, ವಾನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಾರಾಯಣ ಗಣಪತಿ ಹೆಗಡೆ, ಮರಗುಂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ದಿನೇಶ ಚೆನ್ನಪ್ಪ ನಾಯ್ಕ, ತಾರಗೋಡ ಹಾಲು ಉತ್ಪಾದಕರ ಸಹಕಾರ ಸಂಘದ ಮಧುಕೇಶ್ವರ ಉಮಾಮಹೇಶ್ವರ ಹೆಗಡೆ ಇವರುಗಳು ಕಲ್ಯಾಣ ಸಂಘದ ಸದಸ್ಯರುಗಳಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಕೆರಿಯಪ್ಪ ಬಿ ನಾಯ್ಕ ಇವರುಗಳಿಗೆ ತಲಾ ರೂ. 5,000/-, ಮೊತ್ತದ ಚೆಕ್‌ಗಳನ್ನು ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಅವರು ಧಾರವಾಡ ಸಹಕಾರ ಹಾಲು ಒಕ್ಕೂಟದ ಶಿರಸಿಯ ಅಗಸೇಬಾಗಿಲಿನ ಕಚೇರಿಯಲ್ಲಿ ವಿತರಿಸಿದರು.


    ಈ ಸಂದರ್ಭದಲ್ಲಿ ಧಾರವಾಡ ಸಹಕಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಮೌನೇಶ ಎಂ ಸೋನಾರ, ಶಿರಸಿ ಉಪವಿಭಾಗದ ಗುರುದರ್ಶನ ಭಟ್‌, ವಿಸ್ತರಣಾ ಸಮಾಲೋಚಕ ಅಭಿಷೇಕ ನಾಯ್ಕ, ವಾನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ರಮೇಶ ಹೆಗಡೆ ಹಾಗೂ ಹಾಲು ಉತ್ಪಾದಕ ರೈತರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top