Slide
Slide
Slide
previous arrow
next arrow

ರಸ್ತೆ ದುರಸ್ತಿಗಾಗಿ ವಿದ್ಯಾರ್ಥಿಗಳ ಆಗ್ರಹ

300x250 AD

ದಾಂಡೇಲಿ: ನಗರದ ಹಳೆದಾಂಡೇಲಿಯಲ್ಲಿ ಯುಜಿಡಿ ಪೈಪ್ಲೈನ್’ಗಾಗಿ ರಸ್ತೆ ಅಗೆದು ಮುಚ್ಚಿರುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸ್ಥಳೀಯ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಕಳೆದೆರಡು ವರ್ಷಗಳಿಂದ ಈ ರಸ್ತೆಯಲ್ಲಿ ಸಂಚರಿಸಲು ಹೆಣಗಾಡಬೇಕಾದ ಸ್ಥಿತಿಯಿದ್ದು, ದ್ವಿಚಕ್ರ ವಾಹನ ಸವಾರರು ಸಾಕಷ್ಟು ಸಲ ಬಿದ್ದು ಗಾಯ ಮಾಡಿಕೊಂಡಿರುವ ಉದಾಹರಣೆಗಳಿವೆ. ಇಲ್ಲಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜಿದ್ದು, ರಸ್ತೆ ಹದಗೆಟ್ಟಿರುವುದರಿಂದ ಸರಿಯಾದ ಸಮಯಕ್ಕೆ ಬಸ್ಸಿನ ವ್ಯವಸ್ಥೆಯು ಇರುವುದಿಲ್ಲ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೂ ತೀವ್ರ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಈ ಕೂಡಲೆ ರಸ್ತೆಯನ್ನು ದುರಸ್ತಿ ಮಾಡಿಕೊಡಬೇಕೆಂದು ಶಾಲಾ/ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top