• Slide
    Slide
    Slide
    previous arrow
    next arrow
  • ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ: ವಿಸ್ತಾರ ಸಿಇಒ ಹರಿಪ್ರಕಾಶ್ ಕೋಣೆಮನೆ, ಸಂಪಾದಕ ರಾಮಸ್ವಾಮಿ ಆಯ್ಕೆ

    300x250 AD

    ಬೆಂಗಳೂರು: ವಿಸ್ತಾರ ನ್ಯೂಸ್ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ, ಸುದ್ದಿ ಸಂಪಾದಕ ರಾಮಸ್ವಾಮಿ ಹುಲಕೋಡು ಸೇರಿದಂತೆ ನಾಡಿನ ಅನೇಕ
    ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ
    ವಾರ್ಷಿಕ ಪ್ರಶಸ್ತಿ ಘೋಷಣೆಯಾಗಿದೆ.

    2019, 2020, 2021 ಹಾಗೂ 2022ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗಳನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಘೋಷಿಸಿದ್ದಾರೆ. ಹರಿಪ್ರಕಾಶ್ ಕೋಣೆಮನೆ ಅವರು 2019ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ, ರಾಮಸ್ವಾಮಿ ಹುಲಕೋಡು ಅವರು 2021ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    2019ನೇ ಸಾಲಿನ ವಿಶೇಷ ಪ್ರಶಸ್ತಿಗೆ ಡೆಕ್ಕನ್ ಹೆರಾಲ್ಡನ ತಿಲಕ್ ಕುಮಾರ್, 2020ನೇ ಸಾಲಿನ ವಿಶೇಷ ಪ್ರಶಸ್ತಿಗೆ ವಿಆರ್‌ಎಲ್‌ ಮೀಡಿಯಾ ಲಿಮಿಟೆಡ್ ಮುಖ್ಯಸ್ಥ ಡಾ. ವಿಜಯ ಸಂಕೇಶ್ವರ, 2021ನೇ ಸಾಲಿನ ವಿಶೇಷ ಪ್ರಶಸ್ತಿಗೆ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್, 2022ನೇ ಸಾಲಿನ ವಿಶೇಷ ಪ್ರಶಸ್ತಿಗೆ ಹಿರಿಯ ಆರ್ಥಿಕ ತಜ್ಞರಾದ ಸುಶೀಲ ಸುಬ್ರಹ್ಮಣ್ಯಂ ಅವರನ್ನು ಆಯ್ಕೆ ಮಾಡಲಾಗಿದೆ.

    300x250 AD

    ಜೀವಮಾನ ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು, ವಾರ್ಷಿಕ ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top