Slide
Slide
Slide
previous arrow
next arrow

ಫೆ.12ಕ್ಕೆ ‘ಹಣತೆ’ ಮುಂಡಗೋಡ ತಾಲೂಕು ಘಟಕ ಉದ್ಘಾಟನೆ

300x250 AD

ಮುಂಡಗೋಡ: ‘ಹಣತೆ’ ಸಾಹಿತ್ಯಕ, ಸಾಂಸ್ಕೃತಿಕ ಜಗಲಿ ಮುಂಡಗೋಡ ತಾಲೂಕು ಘಟಕದ ಉದ್ಘಾಟನೆ ಪಟ್ಟಣದ ಅನ್ನಪೂರ್ಣೇಶ್ವರಿ ನಗರದ ಶ್ರೀ ಇಡಗುಂಜಿ ಮಹಾಗಣಪತಿ ದೇವಸ್ಥಾನದ ನಾಗೇಶ ಪಾಲನಕರ ವೇದಿಕೆಯಲ್ಲಿ ಫೆ.12 ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಣತೆ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ವಹಿಸಲಿದ್ದು, ಸಾಹಿತಿ ನಾಗಪತಿ ಹೆಗಡೆ ಹುಳಗೋಡ ಅವರು ಹಣತೆ ಬೆಳಗಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ತಾಲೂಕಿನ ಪಾಳ ಸರಕಾರಿ ಉರ್ದು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಾಸುದೇವ ಎಸ್. ನಾಯಕ್ ಪಾಲ್ಗೊಳ್ಳಲಿದ್ದಾರೆ.
ಹಣತೆ ಜಿಲ್ಲಾ ಪ್ರಧಾನ ಸಂಚಾಲಕ ಎನ್.ಜಯಚಂದ್ರನ್, ಸಂಘಟನೆಯ ಯಲ್ಲಾಪುರ ತಾಲೂಕಾಧ್ಯಕ್ಷ ರಾಘವೇಂದ್ರ ಹೊನ್ನಾವರ, ಶಿರಸಿ ಅಧ್ಯಕ್ಷ ಉದಯಕುಮಾರ ಕಾನಳ್ಳಿ, ದಾಂಡೇಲಿ ಅಧ್ಯಕ್ಷ ರಾಘವೇಂದ್ರ ಗಡೆಪ್ಪನವರ್ ಗೌರವ ಉಪಸ್ಥಿತರಿರುವರು ಎಂದು ಹಣತೆ ಮುಂಡಗೋಡ ತಾಲೂಕು ಘಟಕದ ಅಧ್ಯಕ್ಷ ವಿನಯ ನಾಗೇಶ ಪಾಲನಕರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top