• Slide
    Slide
    Slide
    previous arrow
    next arrow
  • ಶಿವರಾತ್ರಿ: ದಕ್ಷಿಣಕಾಶಿ ಗೋಕರ್ಣದಲ್ಲಿ ಪೂಜೆ ಸಲ್ಲಿಸಿದ ಭಕ್ತರು

    300x250 AD

    ಕುಮಟಾ: ತಾಲೂಕಿನ ಗೋಕರ್ಣದಲ್ಲಿ ಶಿವರಾತ್ರಿ ವೈಭವ ಕಳಗಟ್ಟಿದೆ. ಶಿವನ ಆತ್ಮಲಿಂಗವಿರುವ ಏಕೈಕ ಕ್ಷೇತ್ರವಾಗಿರುವ ಹಿನ್ನಲೆ ಶಿವರಾತ್ರಿಯಂದು ನಾನಾ ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.

    ಮಹಾಶಿವರಾತ್ರಿ ಹಿನ್ನಲೆ ಇಲ್ಲಿನ ಮಹಾಬಲೇಶ್ವರನ ಕ್ಷೇತ್ರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹರಿದುಬಂದಿದ್ದು, ಆತ್ಮಲಿಂಗದ ದರ್ಶನ ಪಡೆದು ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು. ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನದಲ್ಲಿ ಅಷ್ಟೋತ್ತರ ಬಿಲ್ವಾರ್ಚನೆ, ಕುಂಭಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನ ಕೈಗೊಳ್ಳಲಾಗುತ್ತಿದೆ.

    300x250 AD

    6 ಗಂಟೆಯ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದ್ದು, ಸರತಿ ಸಾಲಿನಲ್ಲಿ ಆಗಮಿಸಿ ಆತ್ಮಲಿಂಗವನ್ನ ಸ್ಪರ್ಶಿಸಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಯಿತು. ಭಕ್ತರು ಸಹ ಶ್ರದ್ಧಾ, ಭಕ್ತಿಯೊಂದಿಗೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.

    Share This
    300x250 AD
    300x250 AD
    300x250 AD
    Leaderboard Ad
    Back to top