ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಸಮೀಪದ ಕುಳ್ಳೆಯಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು 8 ಜನರನ್ನು ವಶಕ್ಕೆ ಪಡೆದಿದ್ದಾರೆ.
ಕುಳ್ಳೆಯ ಕಲ್ಲೇಶ್ವರ ದೇವಸ್ಥಾನದ ಎದುರಿನ ಸಾರ್ವಜನಿಕ ಪ್ರದೇಶದಲ್ಲಿ ಜೂಜಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೋಲೀಸರು 8 ಜನರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಬಂಧಿತರಿಂದ 8,200 ನಗದನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿದ್ದಾಪುರ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ಕೆ. ಹಾಗೂ ಪಿಎಸ್ಸೈ ಮಾಂತಪ್ಪ ಜಿ.ಕುಂಬಾರ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.