• Slide
    Slide
    Slide
    previous arrow
    next arrow
  • ಅಂದರ್ ಬಾಹರ್: ಸಿದ್ದಾಪುರದಲ್ಲಿ 8 ಜನರ ಬಂಧನ

    300x250 AD

    ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಸಮೀಪದ ಕುಳ್ಳೆಯಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ ವೇಳೆ‌ ದಾಳಿ ನಡೆಸಿದ ಪೋಲೀಸರು 8 ಜನರನ್ನು ವಶಕ್ಕೆ ಪಡೆದಿದ್ದಾರೆ.

    ಕುಳ್ಳೆಯ ಕಲ್ಲೇಶ್ವರ ದೇವಸ್ಥಾನದ ಎದುರಿನ ಸಾರ್ವಜನಿಕ ಪ್ರದೇಶದಲ್ಲಿ ಜೂಜಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೋಲೀಸರು 8 ಜನರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಬಂಧಿತರಿಂದ 8,200 ನಗದನ್ನು ವಶಪಡಿಸಿಕೊಂಡಿದ್ದಾರೆ.

    300x250 AD

    ಕಾರ್ಯಾಚರಣೆಯಲ್ಲಿ ಸಿದ್ದಾಪುರ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ಕೆ. ಹಾಗೂ ಪಿಎಸ್ಸೈ ಮಾಂತಪ್ಪ ಜಿ.ಕುಂಬಾರ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top