ದಾಂಡೇಲಿ: ಮುಂಬರಲಿರುವ ವಿಧಾನ ಸಭಾ ಚುನಾವಣೆ ಅತ್ಯಂತ ಮಹತ್ವಪೂರ್ಣವಾದ ಚುನಾವಣೆಯಾಗಿದ್ದು, ನಮ್ಮ ಡಿವೈಎಫ್ಐ, ಸಿಪಿಐ(ಎಂ) ಪಕ್ಷದ ಈ ಬಾರಿಯ ಮೊದಲ ಆದ್ಯತೆಯೆ ಕೋಮುವಾದಿ ಶಕ್ತಿಗಳನ್ನು ಸೋಲಿಸುವುದಾಗಿದ್ದು, ಆ ನಿಟ್ಟಿನಲ್ಲಿ ನಾವು ಸಂಘನಾತ್ಮಕವಾಗಿ ಒಗ್ಗೂಡಿ ಶ್ರಮಿಸುತ್ತಿದ್ದೇವೆ ಎಂದು ಡಿವೈಎಫ್ಐ ಸಂಘಟನೆಯ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.
ಅವರು ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಈ ರಾಜ್ಯ ಮತ್ತು ದೇಶದಲ್ಲಿ ಬಿಜೆಪಿಯನ್ನು ಸೋಲಿಸುವುದೆ ನಮ್ಮ ಮೊದಲ ಗುರಿಯಾಗಿದೆ. ಆ ನಿಟ್ಟಿನಲ್ಲಿ ವಿಶೇಷ ಪ್ರಾಧ್ಯನ್ಯತೆಯಡಿಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಕೋಮುವಾದಿ ಶಕ್ತಿಗಳನ್ನು ಸೋಲಿಸುವುದೇ ನಮ್ಮ ಆದ್ಯತೆ: ಮುನೀರ್ ಕಾಟಿಪಳ್ಳ
