Slide
Slide
Slide
previous arrow
next arrow

ಈ ಬಾರಿಯ ಬಜೆಟ್ ಎಲ್ಲರಿಗೂ ಚೇತೋಹಾರಿಯಾಗಿದೆ: ಶಾಸಕಿ ರೂಪಾಲಿ

300x250 AD

ಕಾರವಾರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ಎಲ್ಲ ಕ್ಷೇತ್ರ, ಎಲ್ಲ ವರ್ಗಗಳಿಗೂ ಚೇತೋಹಾರಿ ಬಜೆಟ್ ಆಗಿದೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.
ಕೊಟ್ಟ ಭರವಸೆಯಂತೆ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಿದೆ. ಕಾರವಾರದ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಈ ವರ್ಷವೇ ಸಂಪೂರ್ಣಗೊಳ್ಳಲಿದೆ ಎಂದು ಪ್ರಕಟಿಸಿದ್ದಾರೆ. ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ವಿಶೇಷ ಕೊಡುಗೆ ನೀಡಲಾಗಿದೆ. ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರಿಗೂ ಗೌರವ ಧನ ಹೆಚ್ಚಿಸಲಾಗಿದೆ. ಮೀನುಗಾರಿಕೆ, ಕೃಷಿ, ಆರೋಗ್ಯ, ಶಿಕ್ಷಣ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಯೋಜನೆ ರೂಪಿಸಲಾಗಿದೆ. ಯುವ ಜನತೆಗೆ ವಿಶೇಷ ಕೊಡುಗೆ ನೀಡಲಾಗಿದೆ. ಸಿಆರ್‌ಝಡ್ ಮಾನದಂಡ ಸಡಿಲ ಮಾಡುವುದರಿಂದ ಕರಾವಳಿಯಲ್ಲಿ ಅಭಿವೃದ್ಧಿಗೆ ಅನುಕೂಲವಾಗಲಿದೆ. ಬಡವರು, ಮಧ್ಯಮ ವರ್ಗದವರಿಗೆ ಬಜೆಟ್ ಸಹಕಾರಿಯಾಗಿದೆ. ಇದೊಂದು ಪರಿಪೂರ್ಣ ಬಜೆಟ್ ಆಗಿದೆ. ಮುಖ್ಯಮಂತ್ರಿ ಅವರನ್ನು ಅಭಿನಂದಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top