• Slide
    Slide
    Slide
    previous arrow
    next arrow
  • ಭಟ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

    300x250 AD

    ಭಟ್ಕಳ: ತಾಲೂಕಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಸುನೀಲ ನಾಯ್ಕ ಬಿಡುಗಡೆಗೊಳಿಸಿದರು.
    ನಂತರ ಮಾತನಾಡಿದ ಅವರು, ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹತ್ತು ಹಲವು ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟನೆ ಮಾಡಿ ಜಿಲ್ಲೆಯ ಕ್ರಿಯಾಶೀಲ ಘಟಕ ಎನಿಸಿರುವುದು ನಿಜಕ್ಕೂ ಸಂತಸದ ವಿಷಯವಾಗಿದೆ. ಇದೀಗ ಮಾ.1ರಂದು 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಮುರ್ಡೇಶ್ವರದ ಆರ್‌ಎನ್‌ಎಸ್ ಸಭಾಭವನದಲ್ಲಿ ನಡೆಯಲಿದ್ದು, ಮಾನಾಸುತ ಶಂಭು ಹೆಗಡೆ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಲಿದ್ದಾರೆ. ತಾಲೂಕಿನ ಎಲ್ಲ ಸಾಹಿತ್ಯಾಸಕ್ತರು, ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆನೀಡಿದರು.
    ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಕಾರ್ಯದರ್ಶಿ ನಾರಾಯಣ ನಾಯ್ಕ, ಕೋಶಾಧ್ಯಕ್ಷ ಶ್ರೀಧರ ಶೇಟ್, ಕಾರ್ಯಕಾರಿ ಸಮಿತಿ ಸದಸ್ಯ ಸಂತೋಷ ಆಚಾರ್ಯ ಇದ್ದರು

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top