Slide
Slide
Slide
previous arrow
next arrow

ಸರಸ್ವತಿ ವಿದ್ಯಾಕೇಂದ್ರದಲ್ಲಿ ಮಾತಾ ಪಿತೃ ಪೂಜನ

300x250 AD

ಕುಮಟಾ: ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಸರಸ್ವತಿ ವಿದ್ಯಾಕೇಂದ್ರದಲ್ಲಿ ಮಾತಾ ಪಿತೃ ಪೂಜನ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
ವಿದ್ಯಾರ್ಥಿಗಳು ತಮ್ಮ ತಂದೆ- ತಾಯಿಯ ಪಾದ ಪೂಜೆ ನೆರವೇರಿಸಿ, ಅವರಿಂದ ಆಶೀರ್ವಾದ ಪಡೆದರು. ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಸಾಮಾಜಿಕ ಕಾರ್ಯಕರ್ತ ಅಶೋಕ ಭಟ್ ಮಾತನಾಡಿ, ಸಂಸ್ಕಾರ ಇಲ್ಲದಿದ್ದರೆ ಬದುಕು ಬರಡು. ಸಂಸ್ಕಾರವನ್ನು ರೂಢಿಸಿಕೊಳ್ಳವತ್ತ ಸರ್ವರೂ ಪ್ರಯತ್ನ ಮಾಡಬೇಕು. ತಂದೆ ತಾಯಿಗಳನ್ನು ಗೌರವಿಸುವುದು ಆದ್ಯ ಕರ್ತವ್ಯವಾಗಬೇಕು ಎಂದರು.
ಮಕ್ಕಳಿಗೆ ಯಾವ ರೀತಿ ಅಭ್ಯಾಸ ಚಟುವಟಿಕೆ ನಡೆಸಬೇಕು, ತಂದೆ- ತಾಯಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂಬ ಬಗ್ಗೆ ನೈಜ ಫಟನಾವಳಿಗಳ ಮೂಲಕ ವಿವರಿಸಿದರು. ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ ಮಾತಾ ಪಿತೃ ಪೂಜನದ ಮೂಲಕ ಮಕ್ಕಳಲ್ಲಿ ಸಂಸ್ಕಾರ ಬೆಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಜಿ.ವಿ.ಭಟ್, ಶೈಕ್ಷಣಿಕ ಸಲಹೆಗಾರರಾದ ಆರ್.ಎಚ್. ದೇಶಭಂಡಾರಿ, ಮುಖ್ಯ ಶಿಕ್ಷಕಿ ಸುಜಾತಾ ನಾಯ್ಕ ಇದ್ದರು. ಶಿಕ್ಷಕ ಗಣೇಶ ಜೋಶಿ ಕಾರ್ಯಕ್ರಮ ಸ್ವಾಗತಿಸಿದರು. ಗೌರೀಶ ಭಂಡಾರಿ ನಿರೂಪಿಸಿದರು. ಐವತ್ತಕ್ಕೂ ಅಧಿಕ ಮಾತಾ ಪಿತೃರು ಹಾಜರಿದ್ದು ಮಕ್ಕಳಿಂದ ಪಾದ ಪೂಜೆ ಸ್ವೀಕರಿಸಿ, ಹರಸಿದರು.

300x250 AD
Share This
300x250 AD
300x250 AD
300x250 AD
Back to top